Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ