Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ