ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ