ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ