ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.