ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು