ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ