Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)


ನವದೆಹಲಿ: ಭಾರತಕ್ಕೆ ಅಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಉಬರ್ ಚಾಲಕನೊಬ್ಬ ಪಾಕಿಸ್ತಾನಿ ಪ್ರಯಾಣಿಕ ಹಾಗೂ ಆತನ ಭಾರತೀಯ ಸ್ನೇಹಿತೆಯನ್ನು ತಡರಾತ್ರಿ ಕ್ಯಾಬ್‌ನಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.

ಈ ಘಟನೆಯೂ ಆಗಸ್ಟ್ 10ರ ತಡರಾತ್ರಿ ನವದೆಹಲಿಯಲ್ಲಿ ನಡೆದಿದೆ. ಪಾಕಿಸ್ತಾನಿ ಪುರುಷ ಹಾಗೂ ಭಾರತೀಯ ಮಹಿಳೆಯನ್ನು ಕ್ಯಾಬ್‌ನ ಚಾಲಕ ನಡುರಸ್ತೆಯಲ್ಲಿ ಬಿಟ್ಟು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

Join Our Telegram: https://t.me/dcgkannada

ಕ್ಯಾಬ್ ಚಾಲಕ ಮಹಿಳೆಯನ್ನು ಮುಸ್ಲಿಂ ಎಂದು ಭಾವಿಸಿ, ಇದು ಹಿಂದೂಸ್ತಾನ್, ನಿಮ್ಮ ಪಾಕಿಸ್ತಾನವಲ್ಲ. ನೀವು ಹಲಾಲ್‌ನ ಸಂತತಿಗಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೆಲ್ಲವನ್ನು ರೆಕಾರ್ಡ್ ಮಾಡಿರುವ ಮಹಿಳೆ, “ಈ ವ್ಯಕ್ತಿ ರಾತ್ರಿ 12:30 ಕ್ಕೆ ನಮ್ಮನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ” ಎಂದು ತಿಳಿಸಿದ್ದಾರೆ.

ಮಹಿಳೆ ಹೇಳುವ ಪ್ರಕಾರ, ಆಕೆಯ ಸ್ನೇಹಿತ ಪಾಕಿಸ್ತಾನದಲ್ಲಿರುವ ತನ್ನ ಸಂಬಂಧಿಕರ ಬಗ್ಗೆ ಹಾಗೂ ತಾನು ದೆಹಲಿಗೆ ಬಂದಿರುವ ಬಗ್ಗೆ ಮಾತನಾಡುತ್ತಿದ್ದಾಗ ಕ್ಯಾಬ್ ಚಾಲಕ ತಪ್ಪಾಗಿ ಭಾವಿಸಿ ವಾಗ್ದಾಳಿಯನ್ನು ಪ್ರಾರಂಭಿಸಿದ್ದಾನೆ. ತಮ್ಮ ಮಾತುಗಳನ್ನು ನಿಯಂತ್ರಿಸಿ ಎಂದು ಕೇಳಿದರೂ ಕ್ಯಾಬ್‌ನಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ನೂರಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಭಾರತದ ಬಗ್ಗೆ ಅವಹೇಳನ ಮಾಡಿದ ಆರೋಪದ ಬಳಿಕ ಪ್ರಯಾಣಿಕರನ್ನು ಹೊರಹಾಕಿದ್ದಕ್ಕೆ ಹಲವು ಬಳಕೆದಾರರು ಉಬ‌ರ್ ಚಾಲಕನನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಚಾಲಕ ದುರ್ನಡತೆ ತೋರಿದ್ದಾನೆ. ಇಂತಹ ಚಾಲಕರನ್ನು ಕಂಪನಿ ಅಮಾನತು ಮಾಡಬೇಕೆಂದೂ ಆಗ್ರಹಿಸಿದ್ದಾರೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ