Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ