Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ