Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ