Viral video: Come to us if you are infatuated with a woman

Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮಾಡಿ ಕೊಲೆಗೈದಿರುವ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಮಹಿಳೆಯೊಬ್ಬರು ನೀಡಿರುವ ಪ್ರತಿಕ್ರಿಯೆ ಭಾರಿ‌ ಸಂಚಲನ ಸೃಷ್ಟಿಸಿದೆ. (Viral video)

Join Our Telegram: https://t.me/dcgkannada

ಹೌದು, ಈ ಕುರಿತು ಕೋಲ್ಕತಾದ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರ ಸಂವೇದನಾಶೀಲ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral video) ಆಗಿದ್ದು, ಹಲ್ ಚಲ್ ಸೃಷ್ಟಿಸಿದೆ.

‘ನಿಮಿಷಗಳ ಕಾಮಕ್ಕಾಗಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಕೊಲ್ಲುವ ಬದಲು ರೆಡ್ ಲೈಟ್ ಏರಿಯಾಗೆ ಬನ್ನಿ’ ಎಂದು ಪುರುಷರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: News update: ಪವಿತ್ರ ಗೌಡಗೆ ಶಾಕಿಂಗ್ ನ್ಯೂಸ್!

‘ನಿಮಗೆ ಹೆಂಗಸಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬನ್ನಿ. ದಯವಿಟ್ಟು ಕೆಲಸಕ್ಕೆ ಹೋಗುವ ಮಹಿಳೆಯರ ಜೀವನವನ್ನು ಹಾಳು ಮಾಡಬೇಡಿ. ಅತ್ಯಾಚಾರವನ್ನು ಮಾಡುವ ಮೂಲಕ ಅವರ ಜೀವನವನ್ನು ನಾಶಪಡಿಸಬೇಡಿ’ ಎಂದು ಹೇಳಿದ್ದಾರೆ.

‘ನಾವು ಇಲ್ಲಿ ರೆಡ್ ಲೈಟ್ ಏರಿಯಾದಲ್ಲಿ ಇದ್ದೇವೆ, ನೀವು ಇಲ್ಲಿಗೆ ಬರಬಹುದು. ಇಲ್ಲಿ 20-50 ರೂಪಾಯಿಗೆ ಕೆಲಸ ಮಾಡುವ ಹುಡುಗಿಯರು ಇದ್ದಾರೆ. ಆದ್ದರಿಂದ, ದಯವಿಟ್ಟು ಕೆಲಸಕ್ಕೆ ಹೋಗುವ ಮಹಿಳೆಯರನ್ನು ಗುರಿಯಾಗಿಸಬೇಡಿ. ನಾವು ನಮ್ಮ ಮನಸ್ಥಿತಿಯನ್ನು ಬದಲಾಯಿಸಬೇಕಾಗಿದೆ’ ಎಂದು ಹೇಯ ಕೃತ್ಯವನ್ನು ಖಂಡಿಸಿದ್ದಾರೆ.

ಈ ಹೇಳಿಕೆ ನೀಡಿರುವ ಮಹಿಳೆಯನ್ನು ನೆಟ್ಟಿಗರು ಹೀರೋ ಎಂದು ಕರೆದಿದ್ದಾರೆ. RESPECT ಎಂಬ ಒಕ್ಕಣೆಯೊಂದಿಗೆ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು