Viral video: The brave girl on the beach raised an auto rickshaw to save her mother!

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ‌ ಈ ವೀರ ಬಾಲಕಿ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿನ್ನಿಗೋಳಿಯ ಈ ಸಾಹಸ‌ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್‌ ಕ್ಲಾಸ್‌ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.

ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್‌ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಸಿಎಂ ಶಹಬ್ಬಾಸ್ ಗಿರಿ:

ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ