Viral video: The brave girl on the beach raised an auto rickshaw to save her mother!

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ‌ ಈ ವೀರ ಬಾಲಕಿ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿನ್ನಿಗೋಳಿಯ ಈ ಸಾಹಸ‌ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್‌ ಕ್ಲಾಸ್‌ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.

ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್‌ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಸಿಎಂ ಶಹಬ್ಬಾಸ್ ಗಿರಿ:

ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ