Viral video: The brave girl on the beach raised an auto rickshaw to save her mother!

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ‌ ಈ ವೀರ ಬಾಲಕಿ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿನ್ನಿಗೋಳಿಯ ಈ ಸಾಹಸ‌ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್‌ ಕ್ಲಾಸ್‌ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.

ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್‌ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಸಿಎಂ ಶಹಬ್ಬಾಸ್ ಗಿರಿ:

ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ