Viral video: The brave girl on the beach raised an auto rickshaw to save her mother!

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ‌ ಈ ವೀರ ಬಾಲಕಿ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿನ್ನಿಗೋಳಿಯ ಈ ಸಾಹಸ‌ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್‌ ಕ್ಲಾಸ್‌ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.

ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್‌ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಸಿಎಂ ಶಹಬ್ಬಾಸ್ ಗಿರಿ:

ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ