Virat Kohli Retirement Plan

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ.

ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Join Our Telegram: https://t.me/dcgkannada

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

ಇದನ್ನೂ ಓದಿ: Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ