Virat Kohli Retirement Plan

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ.

ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Join Our Telegram: https://t.me/dcgkannada

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

ಇದನ್ನೂ ಓದಿ: Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ