Visit and inspection of rain and flood damaged areas in Hubli, Navlagunda taluk

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಧಾರವಾಡ, ಜೂ.14: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್‌ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ವೀಕ್ಷಣೆ ಮಾಡಿದರು.

ರಸ್ತೆ, ಸೇತುವೆ ಹಾಗೂ ಇತರ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ತ್ವರಿತವಾಗಿ ದುರಸ್ತಿ, ಮರು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸಚಿವ ಲಾಡ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರೈತರು ಈಗಾಗಲೇ ಹೆಸರು ಬೆಳೆ ಹಾಗೂ ಇತರೆ ಮುಂಗಾರು ಬೆಳೆ ಬಿತ್ತಿದ್ದಾರೆ. ಹೆಸರು ಬೆಳೆ ಮೊಳಕೆ ಒಡೆಯುವ ಹಂತಕ್ಕೆ ಬಂದಿದ್ದು, ಧಾರಾಕಾರ ಮಳೆಯಿಂದ ರೈತರಿಗೆ ಆರ್ಥಿಕವಾಗಿ ನಷ್ಟವಾಗಿದೆ. ರೈತರ ಜಮೀನುಗಳಲ್ಲಿನ ಬದುವುಗಳು ಕೊಚ್ಚಿ ಹೋಗಿ ಹಾನಿಯಾಗಿದೆ. ಕ್ಷೇತ್ರದಲ್ಲಿ ಬೆಳೆ ಹಾನಿ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮಾಹಿತಿ ಮತ್ತು ವರದಿ ಮೇಲೆ ಸರ್ಕಾರದ ಜೊತೆ ಚರ್ಚಿಸಿ, ಎಸ್.ಡಿ.ಆರ್.ಎಫ್ ನಿಯಾಮವಳಿಗಳನ್ನು ಪರಿಶೀಲಿಸಿ, ಅದಕ್ಕೆ ಅನುಗುಣವಾಗಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ನವಲಗುಂದ ಭಾಗದಲ್ಲಿ 7-8 ಜಾಗಗಳಲ್ಲಿ ಪ್ರವಾಹ ನೋಡಿದ್ದೇನೆ. ನಾಲಾ ಹಾಗೂ ಹಳ್ಳ ಅಗಲೀಕರಣಕ್ಕೆ ರೂ.1600 ಕೋಟಿ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಲ್ಲಿ ರೂ. 200 ಕೋಟಿ 140 ಕಿ.ಮಿ ಹಳ್ಳ ಅಗಲೀಕರಣ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಬಹಳ ವರ್ಷಗಳಿಂದ ನವಲಗುಂದ, ಕುಂದಗೋಳ ಭಾಗಗಳಲ್ಲಿ ಈ ರೀತಿ ಪ್ರವಾಹ ಪರಿಸ್ಥಿತಿಯಿಂದ ತೊಂದರೆ ಆಗುತ್ತಿದೆ. ಇದಕ್ಕೆ ಸಂಪೂರ್ಣ ಪರಿಹಾರ ಕಂಡು ಹಿಡಿಯಬೇಕು ಎಂದು ಮಾನ್ಯ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಇರುವಂತ ಕಾಮಗಾರಿ ಯೋಜನೆ ಬಂಡು (ಬದು) ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ 160 ಕೋಟಿಯ ಕಾಮಗಾರಿಗೆ ಡಿಪಿಆರ್ ಮಾಡಲಾಗಿದ್ದು, ಅದು ಒಂದು ಹಂತಕ್ಕೆ ಬಂದಿದೆ ಎಂದು ಹೇಳಿದರು.

ಮುಂದಿನ ವರ್ಷ 2026 ರ ಜನವರಿಯಲ್ಲಿ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳದ ಎರಡು ಕಾಮಗಾರಿಗಳು ಪ್ರಾರಂಭವಾದರೆ ಬಹುತೇಕ ಮುಂದೆ ಬರುವ ಮಳೆಗಾಲದಲ್ಲಿ ನವಲಗುಂದಕ್ಕೆ ಮಳೆಯಿಂದಾಗಿ ಪ್ರವಾಹ ಬರುವ ಸಮಸ್ಯೆ ಆಗುವುದಿಲ್ಲ ಎಂದು ತಿಳಿಸಿದರು.

ಹಳ್ಳಗಳ ಭಾಗಗಳಲ್ಲಿರುವ ಹೊಲಗಳಿಗೆ ರೈತರು ಬಿತ್ತನೆಯನ್ನು ಮಾಡಿದ್ದಾರೆ. ಕೆಲವು ಹೊಲಗಳಿಗೆ ನೀರು ನುಗ್ಗಿದೆ. ಅದರಿಂದ ರೈತರಿಗೆ ತೊಂದರೆಯಾಗಿದೆ ಅದನ್ನು ಪರಿಗಣಿಸಿ ಮುಂದೆ ಮತ್ತೆ ಬಿತ್ತನೆ ಮಾಡುವ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ. ಅದರಂತೆ ಮುಂದೆ ಫಸಲು ಬರದೆ ಹೋದಲ್ಲಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್ ಲಾಡ ಅವರು ತಿಳಿಸಿದರು.

ವಿವಿಧ ಗ್ರಾಮಗಳಲ್ಲಿ ಮಳೆಹಾನಿ ವೀಕ್ಷಣೆ:
ನವಲಗುಂದ ವಿಧಾನಸಭಾ ಮತಕ್ಷೆತ್ರ ವ್ಯಾಪ್ತಿಯ ಹುಬ್ಬಳ್ಳಿ ತಾಲೂಕಿನ ಹೆಬಸೂರ ಸಮೀಪದ ನಿಗರಿ ಹಳ್ಳದ ಬ್ರಿಜ್, ಸರಕಾರಿ ಗಂಡು ಮಕ್ಕಳ ಹಾಗೂ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಗಿರುವ ಮಳೆ ಹಾನಿ, ಕೆಸರು, ಅವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಹುಬ್ಬಳ್ಳಿ ತಹಶಿಲ್ದಾರ ಜೆ.ಬಿ.ಮಜ್ಜಗಿ ಹಾಗೂ ಇತರರು ಇದ್ದರು.

ಬೆಣ್ಣಹಳ್ಳದಿಂದ ಬಾಧಿತವಾದ ಅರೆಕುರಹಟ್ಟಿ ಗ್ರಾಮದ ಮನೆಗಳನ್ನು ಹಾಗೂ ರಸ್ತೆ ವಿಕ್ಷಣೆ ಮಾಡಿದ ಸಚಿವರು ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸುವದಾಗಿ ತಿಳಿಸಿದರು. ಅಲ್ಲಿಂದ ಯಮನೂರ ಕರ್ಲವಾಡ ಮಧ್ಯದಲ್ಲಿರುವ ಬ್ರಿಜ್ ವೀಕ್ಷಣೆ ಮಾಡಿ, ರೈತರ ಬಿತ್ತನೆ ಹಾಗೂ ರೈತರ ಕೃಷಿ ಚಟುವಟಿಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕರ್ಲವಾಡ ಗ್ರಾಮದಲ್ಲಿ ಬೆಳೆಹಾನಿಗೆ ಪರಿಹಾರ ನೀಡುವಂತೆ ಹಾಗೂ ಬೆಣ್ಣೆ ಹಳ್ಳದ ತೊಂದರೆ ತಪ್ಪಿಸಲು ರೈತರಿಂದ ಸಚಿವರಿಗೆ ಮನವಿ ಮಾಡಿದರು.

ನಂತರ ಅವರು ನವಲಗುಂದ ಪಟ್ಟಣದ ಚರಂಡಿ ವ್ಯವಸ್ಥೆ, ನವಲಗುಂದ-ಇಬ್ರಾಹಿಂಪುರ ರಸ್ತೆಯಲ್ಲಿ ಬರುವ ಅಂಬಲಿ ಹಳ್ಳ ಮತ್ತು ದೇಸಾಯಿ ಹಳ್ಳದ ಬ್ರಿಜ್, ರಸ್ತೆ, ರೈತರ ಬದು, ಒಡ್ಡುಗಳು ಮಳೆಗೆ ಹಾನಿ ಆಗಿರುವ ಕುರಿತು ಪರಿಶೀಲಿಸಿ, ವಿವರ ಪಡೆದುಕೊಂಡರು.

ನಂತರ ನಗರದಿಂದ ಇಬ್ರಾಹಿಂಪುರ ರಸ್ತೆಯಲ್ಲಿರುವ ಎಸ್. ಎಸ್. ಭಾಗಿ ಶಾಲೆಗೆ ಭೇಟಿ ನೀಡಿ, ಅಂಬಲಿ ಹಾಗೂ ಬಾಸನೂರಿನ ಸರವಿನ ಹಳ್ಳ ಬ್ರಿಡ್ಜ್ ಕಾಮಗಾರಿಗೆ ಅನುಮೋದನೆಗೆ ಪ್ರಸ್ತಾವನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಮಂಡಕ್ಕಿ ಮಿರ್ಚಿ ಸವಿದ ಸಚಿವರು:
ನವಲಗುಂದ ನಗರದ ಶೆಟ್ಟರಕೆರೆಯ ಹತ್ತಿರ ಮಳೆ ನೀರು ಹೊರಚೆಲ್ಲಿ ರಸ್ತೆಯಲ್ಲಿ ನಿಂತು ಸಂಚಾರಕ್ಕೆ ತೊಂದರೆ ಮಾಡಿದ್ದ ಒಳಚರಂಡಿಯ ವೀಕ್ಷಣೆ ಬಳಿಕ ಪಕ್ಕದಲ್ಲಿರುವ ಡಬ್ಬಿ ಅಂಗಡಿಯಲ್ಲಿ ಜನ ಸಾಮಾನ್ಯರಂತೆ ಕುಳಿತು ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳ ಜೊತೆಯಲ್ಲಿ ಮಿರ್ಚಿ, ಮಂಡಕ್ಕಿ ಸವಿದರು. ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಹಾಗೂ ಇತರರು ಸಾಥ ನೀಡಿದರು.

ಬೈಕ್ ಹತ್ತಿ ಪ್ರವಾಹ ಪ್ರದೇಶ ಸುತ್ತಿದ ಸಚಿವರು: ನವಲಗುಂದ ತಾಲೂಕಿನಲ್ಲಿ ಪ್ರವಾಹ ಪೀಡಿತ ಹಾಗೂ ಮಳೆ ಹಾನಿ ಪ್ರದೇಶ ವೀಕ್ಷಣೆ ಪ್ರವಾಸ ಕೈಗೊಂಡಿದ್ದ ಸಂತೋಷ ಲಾಡ್ ಅವರು ಶಾಸಕ ಎನ್.ಎಚ್.ಕೋನರಡ್ಡಿ ಅವರೊಂದಿಗೆ ಹೀರೋ ಹೊಂಡಾ ಬೈಕ್ ಏರಿ ತಾಲೂಕಿನ ಕಾರ್ಲವಾಡ ಗ್ರಾಮದಲ್ಲಿ ಬೆಣ್ಣೆ ಹಳ್ಳದಿಂದ ಬಾಧಿತವಾಗುವ ಎಸ್.ಸಿ. ಕಾಲೋನಿ, ಲಕ್ಷ್ಮಿನಗರ ಪ್ರದೇಶಗಳನ್ನು ವೀಕ್ಷಣೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಮಳೆಹಾನಿ ಪ್ರದೇಶ ವಿಕ್ಷಣೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಶಿಲ್ದಾರ ಸುದೀರ ಸಾಹುಕಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಉಪನಿರ್ದೇಶಕ ಸಂದೀಪ,ತಾ ಪಂ ಇಒ ಭಾಗ್ಯಶ್ರೀ ಜಾಗೀದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ಹಿರಿಯ ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಕೋಟಿಮಠ, ಸಿಪಿಐ ಶಿವಾನಂದ ಕಟಗಿ ಸೇರಿದಂತೆ ಪಂಚಾಯತರಾಜ್ ಇಂಜನಿಯರಿಂಗ್, ಪಂಚಾಯತ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಲೋಕೋಪಯೋಗಿ ಇಲಾಖೆ, ನವಲಗುಂದ ಪುರಸಭೆ, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು