Wall poster, sticker release: Muddebihala village deity fair from May 30

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಮಾಡೋಣ ಎಂದು ಹೇಳಿದರು.

ಜಾತ್ರೆಯಲ್ಲಿ ಏನಿದೆ ಏನಿಲ್ಲ : ಮೇ.30 ರಂದು ಗ್ರಾಮದೇವತೆ ಹಾಗೂ ಶಾರದಾ ದೇವಿ ಭವ್ಯ ಮೆರವಣಿಗೆ, ಸಂಜೆ 6.30ಕ್ಕೆ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ. ರಾತ್ರಿ 11ಕ್ಕೆ ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಡೊಳ್ಳಿನ ಹಾಡಿಕೆ ಕಾರ್ಯಕ್ರಮ ಜರುಗುವುದು.

ಮೇ.31 ರಂದು ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಗೀಗೀ ಪದಗಳು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಅಂದು ಬೆಳಗ್ಗೆ 10 ಕ್ಕೆ ನಾಲತವಾಡ ರಸ್ತೆಯಲ್ಲಿ ಹೊಲದಲ್ಲಿ ಪುಟ್ಟಿಗಾಡಿ ಸ್ಪರ್ಧೆ, ಮದ್ಯಾಹ್ನ 2ಕ್ಕೆ ಎತ್ತಿನ ಕೂಡುಗಾಡಿಗಳ ಓಟದ ಸ್ಪರ್ಧೆ, ರಾತ್ರಿ 8ಕ್ಕೆ ಜಾನಪದ ಜಾತ್ರೆ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ.

ಜೂ.1 ರಂದು ಮದ್ಯಾಹ್ನ 12ಕ್ಕೆ ರಾಜ್ಯಮಟ್ಟದ ತೆರಬಂಡಿ ಸ್ಪರ್ಧೆ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7ಕ್ಕೆ ಮದ್ದು ಸುಡುವ ಹಾಗೂ ಟ್ರ್ಯಾಕ್ಟರ್ ರಿವರ್ಸ್ ಸ್ಪರ್ಧೆ, ರಾತ್ರಿ 8ಕ್ಕೆ ನಗೆ ಹಬ್ಬ ನಡೆಯಲಿದೆ.

ಜೂ.2 ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,10.15 ಕ್ಕೆ ಸ್ಲೋ ಬೈಕ್ ರೇಸ್ ಸ್ಪರ್ಧೆ,10.30ಕ್ಕೆ ಟಗರಿನ ಕಾಳಗ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7.30ಕ್ಕೆ ಲೈವ್ ಸಂಗೀತ ರಸಮಂಜರಿ ಕಾರ್ಯಕ್ರಮ,8ಕ್ಕೆ ಜಾನಪದ ಜಾತ್ರೆ ನಡೆಯಲಿದೆ. ಜೂ.
3 ರಂದು ಬೆಳಗ್ಗೆ 9ಕ್ಕೆ ಭಾರ ಎತ್ತುವ ಸ್ಪರ್ಧೆ, ಮದ್ಯಾಹ್ನ 4ಕ್ಕೆ ಗ್ರಾಮದೇವತೆ, ಶಾರದಾ ದೇವಿಯರನ್ನು ಮೂಲಸ್ಥಳಕ್ಕೆ ಕರೆದೊಯ್ಯುವುದು. ರಾತ್ರಿ 8 ಗಂಟೆಗೆ ಸಂಗೀತ ರಸಮಂಜರಿ ನಡೆಯಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಕಲೆಗೆ ಕೊಕ್ : ಐದು ದಿನಗಳ ಜಾತ್ರೆಯಲ್ಲಿ ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಕಮಿಟಿಯವರು ಸಾಂಪ್ರದಾಯಿಕ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ರಂಗಭೂಮಿ ಕಲಾವಿದರ ಬೇಸರಕ್ಕೆ ಕಾರಣವಾಗಿದೆ. ಸ್ಥಳೀಯ ತಾಳಿಕೋಟಿಯ ರಾಜು ತಾಳಿಕೋಟೆ, ನಾಲತವಾಡದ ಸಿದ್ದು ಹಂಪನಗೌಡರ ಅವರ ನಾಟಕ ಕಂಪನಿಗಳಿದ್ದರೂ ಕಮೀಟಿಯವರು ನಾಲ್ಕು ದಿನಗಳ ಕಾಲ ಟಿವಿ ಕಲಾವಿದರ ಪ್ರದರ್ಶನಕ್ಕೆ ಒತ್ತು ನೀಡಿರುವುದು ನಾಟಕ ಪ್ರೇಮಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸಾಮಾಜಿಕ, ಭಕ್ತಿ ಪ್ರದಾನ ನಾಟಕ ಪ್ರದರ್ಶನಕ್ಕೆ ಆದ್ಯತೆ ನೀಡಬೇಕಿತ್ತು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ