Wall poster, sticker release: Muddebihala village deity fair from May 30

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಮಾಡೋಣ ಎಂದು ಹೇಳಿದರು.

ಜಾತ್ರೆಯಲ್ಲಿ ಏನಿದೆ ಏನಿಲ್ಲ : ಮೇ.30 ರಂದು ಗ್ರಾಮದೇವತೆ ಹಾಗೂ ಶಾರದಾ ದೇವಿ ಭವ್ಯ ಮೆರವಣಿಗೆ, ಸಂಜೆ 6.30ಕ್ಕೆ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ. ರಾತ್ರಿ 11ಕ್ಕೆ ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಡೊಳ್ಳಿನ ಹಾಡಿಕೆ ಕಾರ್ಯಕ್ರಮ ಜರುಗುವುದು.

ಮೇ.31 ರಂದು ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಗೀಗೀ ಪದಗಳು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಅಂದು ಬೆಳಗ್ಗೆ 10 ಕ್ಕೆ ನಾಲತವಾಡ ರಸ್ತೆಯಲ್ಲಿ ಹೊಲದಲ್ಲಿ ಪುಟ್ಟಿಗಾಡಿ ಸ್ಪರ್ಧೆ, ಮದ್ಯಾಹ್ನ 2ಕ್ಕೆ ಎತ್ತಿನ ಕೂಡುಗಾಡಿಗಳ ಓಟದ ಸ್ಪರ್ಧೆ, ರಾತ್ರಿ 8ಕ್ಕೆ ಜಾನಪದ ಜಾತ್ರೆ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ.

ಜೂ.1 ರಂದು ಮದ್ಯಾಹ್ನ 12ಕ್ಕೆ ರಾಜ್ಯಮಟ್ಟದ ತೆರಬಂಡಿ ಸ್ಪರ್ಧೆ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7ಕ್ಕೆ ಮದ್ದು ಸುಡುವ ಹಾಗೂ ಟ್ರ್ಯಾಕ್ಟರ್ ರಿವರ್ಸ್ ಸ್ಪರ್ಧೆ, ರಾತ್ರಿ 8ಕ್ಕೆ ನಗೆ ಹಬ್ಬ ನಡೆಯಲಿದೆ.

ಜೂ.2 ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,10.15 ಕ್ಕೆ ಸ್ಲೋ ಬೈಕ್ ರೇಸ್ ಸ್ಪರ್ಧೆ,10.30ಕ್ಕೆ ಟಗರಿನ ಕಾಳಗ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7.30ಕ್ಕೆ ಲೈವ್ ಸಂಗೀತ ರಸಮಂಜರಿ ಕಾರ್ಯಕ್ರಮ,8ಕ್ಕೆ ಜಾನಪದ ಜಾತ್ರೆ ನಡೆಯಲಿದೆ. ಜೂ.
3 ರಂದು ಬೆಳಗ್ಗೆ 9ಕ್ಕೆ ಭಾರ ಎತ್ತುವ ಸ್ಪರ್ಧೆ, ಮದ್ಯಾಹ್ನ 4ಕ್ಕೆ ಗ್ರಾಮದೇವತೆ, ಶಾರದಾ ದೇವಿಯರನ್ನು ಮೂಲಸ್ಥಳಕ್ಕೆ ಕರೆದೊಯ್ಯುವುದು. ರಾತ್ರಿ 8 ಗಂಟೆಗೆ ಸಂಗೀತ ರಸಮಂಜರಿ ನಡೆಯಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಕಲೆಗೆ ಕೊಕ್ : ಐದು ದಿನಗಳ ಜಾತ್ರೆಯಲ್ಲಿ ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಕಮಿಟಿಯವರು ಸಾಂಪ್ರದಾಯಿಕ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ರಂಗಭೂಮಿ ಕಲಾವಿದರ ಬೇಸರಕ್ಕೆ ಕಾರಣವಾಗಿದೆ. ಸ್ಥಳೀಯ ತಾಳಿಕೋಟಿಯ ರಾಜು ತಾಳಿಕೋಟೆ, ನಾಲತವಾಡದ ಸಿದ್ದು ಹಂಪನಗೌಡರ ಅವರ ನಾಟಕ ಕಂಪನಿಗಳಿದ್ದರೂ ಕಮೀಟಿಯವರು ನಾಲ್ಕು ದಿನಗಳ ಕಾಲ ಟಿವಿ ಕಲಾವಿದರ ಪ್ರದರ್ಶನಕ್ಕೆ ಒತ್ತು ನೀಡಿರುವುದು ನಾಟಕ ಪ್ರೇಮಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸಾಮಾಜಿಕ, ಭಕ್ತಿ ಪ್ರದಾನ ನಾಟಕ ಪ್ರದರ್ಶನಕ್ಕೆ ಆದ್ಯತೆ ನೀಡಬೇಕಿತ್ತು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು