Wall poster, sticker release: Muddebihala village deity fair from May 30

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಮಾಡೋಣ ಎಂದು ಹೇಳಿದರು.

ಜಾತ್ರೆಯಲ್ಲಿ ಏನಿದೆ ಏನಿಲ್ಲ : ಮೇ.30 ರಂದು ಗ್ರಾಮದೇವತೆ ಹಾಗೂ ಶಾರದಾ ದೇವಿ ಭವ್ಯ ಮೆರವಣಿಗೆ, ಸಂಜೆ 6.30ಕ್ಕೆ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ. ರಾತ್ರಿ 11ಕ್ಕೆ ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಡೊಳ್ಳಿನ ಹಾಡಿಕೆ ಕಾರ್ಯಕ್ರಮ ಜರುಗುವುದು.

ಮೇ.31 ರಂದು ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಗೀಗೀ ಪದಗಳು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಅಂದು ಬೆಳಗ್ಗೆ 10 ಕ್ಕೆ ನಾಲತವಾಡ ರಸ್ತೆಯಲ್ಲಿ ಹೊಲದಲ್ಲಿ ಪುಟ್ಟಿಗಾಡಿ ಸ್ಪರ್ಧೆ, ಮದ್ಯಾಹ್ನ 2ಕ್ಕೆ ಎತ್ತಿನ ಕೂಡುಗಾಡಿಗಳ ಓಟದ ಸ್ಪರ್ಧೆ, ರಾತ್ರಿ 8ಕ್ಕೆ ಜಾನಪದ ಜಾತ್ರೆ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ.

ಜೂ.1 ರಂದು ಮದ್ಯಾಹ್ನ 12ಕ್ಕೆ ರಾಜ್ಯಮಟ್ಟದ ತೆರಬಂಡಿ ಸ್ಪರ್ಧೆ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7ಕ್ಕೆ ಮದ್ದು ಸುಡುವ ಹಾಗೂ ಟ್ರ್ಯಾಕ್ಟರ್ ರಿವರ್ಸ್ ಸ್ಪರ್ಧೆ, ರಾತ್ರಿ 8ಕ್ಕೆ ನಗೆ ಹಬ್ಬ ನಡೆಯಲಿದೆ.

ಜೂ.2 ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,10.15 ಕ್ಕೆ ಸ್ಲೋ ಬೈಕ್ ರೇಸ್ ಸ್ಪರ್ಧೆ,10.30ಕ್ಕೆ ಟಗರಿನ ಕಾಳಗ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7.30ಕ್ಕೆ ಲೈವ್ ಸಂಗೀತ ರಸಮಂಜರಿ ಕಾರ್ಯಕ್ರಮ,8ಕ್ಕೆ ಜಾನಪದ ಜಾತ್ರೆ ನಡೆಯಲಿದೆ. ಜೂ.
3 ರಂದು ಬೆಳಗ್ಗೆ 9ಕ್ಕೆ ಭಾರ ಎತ್ತುವ ಸ್ಪರ್ಧೆ, ಮದ್ಯಾಹ್ನ 4ಕ್ಕೆ ಗ್ರಾಮದೇವತೆ, ಶಾರದಾ ದೇವಿಯರನ್ನು ಮೂಲಸ್ಥಳಕ್ಕೆ ಕರೆದೊಯ್ಯುವುದು. ರಾತ್ರಿ 8 ಗಂಟೆಗೆ ಸಂಗೀತ ರಸಮಂಜರಿ ನಡೆಯಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಕಲೆಗೆ ಕೊಕ್ : ಐದು ದಿನಗಳ ಜಾತ್ರೆಯಲ್ಲಿ ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಕಮಿಟಿಯವರು ಸಾಂಪ್ರದಾಯಿಕ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ರಂಗಭೂಮಿ ಕಲಾವಿದರ ಬೇಸರಕ್ಕೆ ಕಾರಣವಾಗಿದೆ. ಸ್ಥಳೀಯ ತಾಳಿಕೋಟಿಯ ರಾಜು ತಾಳಿಕೋಟೆ, ನಾಲತವಾಡದ ಸಿದ್ದು ಹಂಪನಗೌಡರ ಅವರ ನಾಟಕ ಕಂಪನಿಗಳಿದ್ದರೂ ಕಮೀಟಿಯವರು ನಾಲ್ಕು ದಿನಗಳ ಕಾಲ ಟಿವಿ ಕಲಾವಿದರ ಪ್ರದರ್ಶನಕ್ಕೆ ಒತ್ತು ನೀಡಿರುವುದು ನಾಟಕ ಪ್ರೇಮಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸಾಮಾಜಿಕ, ಭಕ್ತಿ ಪ್ರದಾನ ನಾಟಕ ಪ್ರದರ್ಶನಕ್ಕೆ ಆದ್ಯತೆ ನೀಡಬೇಕಿತ್ತು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು