Wall poster, sticker release: Muddebihala village deity fair from May 30

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಮಾಡೋಣ ಎಂದು ಹೇಳಿದರು.

ಜಾತ್ರೆಯಲ್ಲಿ ಏನಿದೆ ಏನಿಲ್ಲ : ಮೇ.30 ರಂದು ಗ್ರಾಮದೇವತೆ ಹಾಗೂ ಶಾರದಾ ದೇವಿ ಭವ್ಯ ಮೆರವಣಿಗೆ, ಸಂಜೆ 6.30ಕ್ಕೆ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ. ರಾತ್ರಿ 11ಕ್ಕೆ ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಡೊಳ್ಳಿನ ಹಾಡಿಕೆ ಕಾರ್ಯಕ್ರಮ ಜರುಗುವುದು.

ಮೇ.31 ರಂದು ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಗೀಗೀ ಪದಗಳು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಅಂದು ಬೆಳಗ್ಗೆ 10 ಕ್ಕೆ ನಾಲತವಾಡ ರಸ್ತೆಯಲ್ಲಿ ಹೊಲದಲ್ಲಿ ಪುಟ್ಟಿಗಾಡಿ ಸ್ಪರ್ಧೆ, ಮದ್ಯಾಹ್ನ 2ಕ್ಕೆ ಎತ್ತಿನ ಕೂಡುಗಾಡಿಗಳ ಓಟದ ಸ್ಪರ್ಧೆ, ರಾತ್ರಿ 8ಕ್ಕೆ ಜಾನಪದ ಜಾತ್ರೆ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ.

ಜೂ.1 ರಂದು ಮದ್ಯಾಹ್ನ 12ಕ್ಕೆ ರಾಜ್ಯಮಟ್ಟದ ತೆರಬಂಡಿ ಸ್ಪರ್ಧೆ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7ಕ್ಕೆ ಮದ್ದು ಸುಡುವ ಹಾಗೂ ಟ್ರ್ಯಾಕ್ಟರ್ ರಿವರ್ಸ್ ಸ್ಪರ್ಧೆ, ರಾತ್ರಿ 8ಕ್ಕೆ ನಗೆ ಹಬ್ಬ ನಡೆಯಲಿದೆ.

ಜೂ.2 ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,10.15 ಕ್ಕೆ ಸ್ಲೋ ಬೈಕ್ ರೇಸ್ ಸ್ಪರ್ಧೆ,10.30ಕ್ಕೆ ಟಗರಿನ ಕಾಳಗ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7.30ಕ್ಕೆ ಲೈವ್ ಸಂಗೀತ ರಸಮಂಜರಿ ಕಾರ್ಯಕ್ರಮ,8ಕ್ಕೆ ಜಾನಪದ ಜಾತ್ರೆ ನಡೆಯಲಿದೆ. ಜೂ.
3 ರಂದು ಬೆಳಗ್ಗೆ 9ಕ್ಕೆ ಭಾರ ಎತ್ತುವ ಸ್ಪರ್ಧೆ, ಮದ್ಯಾಹ್ನ 4ಕ್ಕೆ ಗ್ರಾಮದೇವತೆ, ಶಾರದಾ ದೇವಿಯರನ್ನು ಮೂಲಸ್ಥಳಕ್ಕೆ ಕರೆದೊಯ್ಯುವುದು. ರಾತ್ರಿ 8 ಗಂಟೆಗೆ ಸಂಗೀತ ರಸಮಂಜರಿ ನಡೆಯಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಕಲೆಗೆ ಕೊಕ್ : ಐದು ದಿನಗಳ ಜಾತ್ರೆಯಲ್ಲಿ ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಕಮಿಟಿಯವರು ಸಾಂಪ್ರದಾಯಿಕ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ರಂಗಭೂಮಿ ಕಲಾವಿದರ ಬೇಸರಕ್ಕೆ ಕಾರಣವಾಗಿದೆ. ಸ್ಥಳೀಯ ತಾಳಿಕೋಟಿಯ ರಾಜು ತಾಳಿಕೋಟೆ, ನಾಲತವಾಡದ ಸಿದ್ದು ಹಂಪನಗೌಡರ ಅವರ ನಾಟಕ ಕಂಪನಿಗಳಿದ್ದರೂ ಕಮೀಟಿಯವರು ನಾಲ್ಕು ದಿನಗಳ ಕಾಲ ಟಿವಿ ಕಲಾವಿದರ ಪ್ರದರ್ಶನಕ್ಕೆ ಒತ್ತು ನೀಡಿರುವುದು ನಾಟಕ ಪ್ರೇಮಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸಾಮಾಜಿಕ, ಭಕ್ತಿ ಪ್ರದಾನ ನಾಟಕ ಪ್ರದರ್ಶನಕ್ಕೆ ಆದ್ಯತೆ ನೀಡಬೇಕಿತ್ತು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ