ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ.

ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ಜೀವನಾಡಿಯಾಗಿರುವ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 524.256 ಮಿ ಎತ್ತರಿಸುವ ಪ್ರಸ್ತಾವ ಸರ್ಕಾರದ ಮಟ್ಟದಲ್ಲಿ ನನೆಗುದಿಗೆ ಬಿದ್ದಿದೆ.ಜಿಲ್ಲೆಯಲ್ಲಿ ಕಬ್ಬು,ಈರುಳ್ಳಿ,ನಿಂಬೆ ಸೇರಿದಂತೆ ಪ್ರಮುಖ ಬೆಳೆಗಳ ಬೆಲೆ ಕುಸಿತವಾಗಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾಮಿನಾಥನ್ ವರದಿ ಜಾರಿಗೆ ತರುತ್ತಿಲ್ಲ.79 ವರ್ಷ ನಮ್ಮನ್ನಾಳಿದ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.

ಮೇ.8 ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ವಿದ್ಯುತ್,ನೀರಾವರಿ,ಹೈನುಗಾರಿಕೆ ಖಾಸಗಿಯವರ ಪಾಲಾಗುತ್ತಿದೆ.ಈ ಬಗ್ಗೆ ಅರಿವು ಮೂಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.ನಾಗರಬೆಟ್ಟ ಏತ ನೀರಾವರಿ ಯೋಜನೆ ಆರಂಭಕ್ಕೆ ಅಧಿಕಾರಿಗಳು,ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯಿAದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಯಾವುದೇ ಪಕ್ಷ ,ರಾಜಕಾರಣಿಗಳು ಆಡಳಿತದ ಸಮಯದಲ್ಲಿ ಬೆಂಬಲ ನೀಡಿಲ್ಲ.ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಬಳಸಿಕೊಂಡಿದ್ದಾರೆ.ಎಲ್ಲ ಸರಕಾರಗಳಿಂದ ರೈತರಿಗೆ ಮೋಸವಾಗುತ್ತಿದೆ.ರೈತರಿಗೆ 25 ಸಾವಿರದಲ್ಲಿ ದೊರೆಯುವ ಟಿಸಿ ಈಗ ಮೂರು ಲಕ್ಷ ರೂ.ಕೊಡಬೇಕಾಗಿದೆ.ಟಿಸಿಗೆ ಮೀಟರ್ ಕೂಡಿಸಲು 18-20 ಸಾವಿರ ರೂ.ತಗೆದುಕೊಳ್ಳುತ್ತಿದ್ದಾರೆ.ಕಾಲುವೆಗಳು ಒಡೆದು ಹೋಗಿದ್ದರೂ ಕೇಳುವವರಿಲ್ಲ.2018ರಲ್ಲಿ ಆರಂಭವಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಹತ್ತು ವರ್ಷಗಳಾಗುತ್ತ ಬಂದಿದ್ದರೂ ಈವರೆಗೂ ಮುಗಿದಿಲ್ಲ.ವಿಜಯಪುರದಲ್ಲಿ ಮೇ.8 ರಂದು ನಡೆಯಲಿರುವ ರೈತ ಜನಜಾಗೃತಿ ಸಮಾವೇಶಕ್ಕೆ ತಾಲ್ಲೂಕಿನ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ರೈತರ ವಿಷಯದಲ್ಲಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತೇನೆ.ಸಂದರ್ಭ ಬಂದರೆ ನಾನು ಇರುವ ಪಕ್ಷ ಬಿಡುತ್ತೇನೆ.ಆದರೆ ರೈತರಿಗೆ ಅನ್ಯಾಯವಾಗುವುದಕ್ಕೆ ಯಾವತ್ತಿಗೂ ಬಿಡುವುದಿಲ್ಲ ಎಂದು ಮುಖಂಡ ಶಾಂತಗೌಡ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ವಿಜಯಪುರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊoಡು ಈ ಸಮಾವೇಶ ಆಯೋಜಿಸಲಾಗಿದ್ದು ಸಾಧಕ ರೈತರಿಗೆ ನೇಗಿಲಯೋಗಿ ಪ್ರಶಸ್ತಿ ಹಾಗೂ ವಿವಿಧ ಕ್ಷೇಥ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟಿçÃಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ,ತಾಲ್ಲೂಕು ಅಧ್ಯಕ್ಷ ಮಹಾಂತಗೌಡ ಬಿರಾದಾರ,ಕೋಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ,ಮುಖಂಡರಾದ ಮುತ್ತು ಹಿರೇಮಠ,ಅಪ್ಪುಗೌಡ ಪಾಟೀಲ,ಶಿವನಗೌಡ ಕೇಸಪ್ಪಗೌಡರ,ಈಶ್ವರ ಬಡಿಗೇರ ಮೊದಲಾದವರು ಇದ್ದರು.

ರಾಜಕಾರಣಿಗಳು ತಲೆ ತಗ್ಗಿಸಬೇಕು-ನಡಹಳ್ಳಿ: ಎಂಟು ಸಾವಿರ ಎಕರೆ ನೀರಾವರಿಗೆ ಒಳಪಡುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದಕ್ಕೆ ಈ ಭಾಗದ ರಾಜಕಾರಣಿಗಳು ತಲೆತಗ್ಗಿಸಬೇಕು.ಕೆಲವು ರೈತರು ತಮಗೆ ಅವಾರ್ಡ್ ಕಾಪಿ ಕೊಟ್ಟರೆ ಕೆಲಸ ಆರಂಭಿಸಲು ತಿಳಿಸುತ್ತಿದ್ದಾರೆ.ಸರ್ಕಾರ ಅವರಿಗೆ ಅವಾರ್ಡ ಕಾಪಿ ಕೊಟ್ಟು ಕಾಲುವೆ ಬಾಕಿ ಕೆಲಸ ಪೂರ್ಣಗೊಳಿಸಬೇಕು.ಒಂದು ತಿಂಗಳ ಒಳಗಾಗಿ ಕಾಲುವೆ ಕಾಮಗಾರಿ ಕೆಲಸ ಆರಂಭಗೊಳ್ಳದಿದ್ದಲ್ಲಿ ಯೋಜನೆ ವ್ಯಾಪ್ತಿಯಲ್ಲಿ ಒಳಪಡುವ 30ಹಳ್ಳಿಗಳ ರೈತರೊಂದಿಗೆ ಉಗ್ರ ಹೋರಾಟ ಮಾಡುತ್ತೇವೆ.ಜನಪ್ರತಿನಿಧಿಗಳ ಮನೆ ಮುಂದೆಯೂ ನಾವು ಹೋರಾಟ ಮಾಡಬೇಕಾಗುತ್ತದೆ.
—ಶಾಂತಗೌಡ ಪಾಟೀಲ ನಡಹಳ್ಳಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್