ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ.

ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ಜೀವನಾಡಿಯಾಗಿರುವ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 524.256 ಮಿ ಎತ್ತರಿಸುವ ಪ್ರಸ್ತಾವ ಸರ್ಕಾರದ ಮಟ್ಟದಲ್ಲಿ ನನೆಗುದಿಗೆ ಬಿದ್ದಿದೆ.ಜಿಲ್ಲೆಯಲ್ಲಿ ಕಬ್ಬು,ಈರುಳ್ಳಿ,ನಿಂಬೆ ಸೇರಿದಂತೆ ಪ್ರಮುಖ ಬೆಳೆಗಳ ಬೆಲೆ ಕುಸಿತವಾಗಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾಮಿನಾಥನ್ ವರದಿ ಜಾರಿಗೆ ತರುತ್ತಿಲ್ಲ.79 ವರ್ಷ ನಮ್ಮನ್ನಾಳಿದ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.

ಮೇ.8 ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ವಿದ್ಯುತ್,ನೀರಾವರಿ,ಹೈನುಗಾರಿಕೆ ಖಾಸಗಿಯವರ ಪಾಲಾಗುತ್ತಿದೆ.ಈ ಬಗ್ಗೆ ಅರಿವು ಮೂಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.ನಾಗರಬೆಟ್ಟ ಏತ ನೀರಾವರಿ ಯೋಜನೆ ಆರಂಭಕ್ಕೆ ಅಧಿಕಾರಿಗಳು,ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯಿAದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಯಾವುದೇ ಪಕ್ಷ ,ರಾಜಕಾರಣಿಗಳು ಆಡಳಿತದ ಸಮಯದಲ್ಲಿ ಬೆಂಬಲ ನೀಡಿಲ್ಲ.ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಬಳಸಿಕೊಂಡಿದ್ದಾರೆ.ಎಲ್ಲ ಸರಕಾರಗಳಿಂದ ರೈತರಿಗೆ ಮೋಸವಾಗುತ್ತಿದೆ.ರೈತರಿಗೆ 25 ಸಾವಿರದಲ್ಲಿ ದೊರೆಯುವ ಟಿಸಿ ಈಗ ಮೂರು ಲಕ್ಷ ರೂ.ಕೊಡಬೇಕಾಗಿದೆ.ಟಿಸಿಗೆ ಮೀಟರ್ ಕೂಡಿಸಲು 18-20 ಸಾವಿರ ರೂ.ತಗೆದುಕೊಳ್ಳುತ್ತಿದ್ದಾರೆ.ಕಾಲುವೆಗಳು ಒಡೆದು ಹೋಗಿದ್ದರೂ ಕೇಳುವವರಿಲ್ಲ.2018ರಲ್ಲಿ ಆರಂಭವಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಹತ್ತು ವರ್ಷಗಳಾಗುತ್ತ ಬಂದಿದ್ದರೂ ಈವರೆಗೂ ಮುಗಿದಿಲ್ಲ.ವಿಜಯಪುರದಲ್ಲಿ ಮೇ.8 ರಂದು ನಡೆಯಲಿರುವ ರೈತ ಜನಜಾಗೃತಿ ಸಮಾವೇಶಕ್ಕೆ ತಾಲ್ಲೂಕಿನ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ರೈತರ ವಿಷಯದಲ್ಲಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತೇನೆ.ಸಂದರ್ಭ ಬಂದರೆ ನಾನು ಇರುವ ಪಕ್ಷ ಬಿಡುತ್ತೇನೆ.ಆದರೆ ರೈತರಿಗೆ ಅನ್ಯಾಯವಾಗುವುದಕ್ಕೆ ಯಾವತ್ತಿಗೂ ಬಿಡುವುದಿಲ್ಲ ಎಂದು ಮುಖಂಡ ಶಾಂತಗೌಡ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ವಿಜಯಪುರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊoಡು ಈ ಸಮಾವೇಶ ಆಯೋಜಿಸಲಾಗಿದ್ದು ಸಾಧಕ ರೈತರಿಗೆ ನೇಗಿಲಯೋಗಿ ಪ್ರಶಸ್ತಿ ಹಾಗೂ ವಿವಿಧ ಕ್ಷೇಥ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟಿçÃಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ,ತಾಲ್ಲೂಕು ಅಧ್ಯಕ್ಷ ಮಹಾಂತಗೌಡ ಬಿರಾದಾರ,ಕೋಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ,ಮುಖಂಡರಾದ ಮುತ್ತು ಹಿರೇಮಠ,ಅಪ್ಪುಗೌಡ ಪಾಟೀಲ,ಶಿವನಗೌಡ ಕೇಸಪ್ಪಗೌಡರ,ಈಶ್ವರ ಬಡಿಗೇರ ಮೊದಲಾದವರು ಇದ್ದರು.

ರಾಜಕಾರಣಿಗಳು ತಲೆ ತಗ್ಗಿಸಬೇಕು-ನಡಹಳ್ಳಿ: ಎಂಟು ಸಾವಿರ ಎಕರೆ ನೀರಾವರಿಗೆ ಒಳಪಡುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದಕ್ಕೆ ಈ ಭಾಗದ ರಾಜಕಾರಣಿಗಳು ತಲೆತಗ್ಗಿಸಬೇಕು.ಕೆಲವು ರೈತರು ತಮಗೆ ಅವಾರ್ಡ್ ಕಾಪಿ ಕೊಟ್ಟರೆ ಕೆಲಸ ಆರಂಭಿಸಲು ತಿಳಿಸುತ್ತಿದ್ದಾರೆ.ಸರ್ಕಾರ ಅವರಿಗೆ ಅವಾರ್ಡ ಕಾಪಿ ಕೊಟ್ಟು ಕಾಲುವೆ ಬಾಕಿ ಕೆಲಸ ಪೂರ್ಣಗೊಳಿಸಬೇಕು.ಒಂದು ತಿಂಗಳ ಒಳಗಾಗಿ ಕಾಲುವೆ ಕಾಮಗಾರಿ ಕೆಲಸ ಆರಂಭಗೊಳ್ಳದಿದ್ದಲ್ಲಿ ಯೋಜನೆ ವ್ಯಾಪ್ತಿಯಲ್ಲಿ ಒಳಪಡುವ 30ಹಳ್ಳಿಗಳ ರೈತರೊಂದಿಗೆ ಉಗ್ರ ಹೋರಾಟ ಮಾಡುತ್ತೇವೆ.ಜನಪ್ರತಿನಿಧಿಗಳ ಮನೆ ಮುಂದೆಯೂ ನಾವು ಹೋರಾಟ ಮಾಡಬೇಕಾಗುತ್ತದೆ.
—ಶಾಂತಗೌಡ ಪಾಟೀಲ ನಡಹಳ್ಳಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ