What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು