What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.