What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ