What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ