ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜ.೮ ರಂದು ನಡೆಯಲಿದೆ.
ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.ಹಿಂದಿನ ಅಧ್ಯಕ್ಷ ಸತೀಶ ಓಸ್ವಾಲ ಈಗಾಗಲೇ ಎರಡು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದು ಸಾಮಾನ್ಯ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆ ಇದೆ.

ಡಿಸಿಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇಲ್ಲ.ಊರಿನ ಹಿರಿಯರು ಈಗಾಗಲೇ ನನ್ನನ್ನು ಬ್ಯಾಂಕಿನ ಎರಡು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಮುಂಬರುವ ದಿನಗಳಲ್ಲಿ ಹಿರಿಯರ ಮಾತಿಗೆ ತಲೆಬಾಗಿ ಮುನ್ನಡೆಯುತ್ತೇನೆ ಎಂದು ಉತ್ತರಿಸಿದರು.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಸಂಗನಗೌಡ ಬಿರಾದಾರ(ಜಿಟಿಸಿ), ರಾಜಶೇಖರ ಕರಡ್ಡಿ ಹಾಗೂ ಪ್ರಭುರಾಜ ಕಲ್ಬುರ್ಗಿ ಇದ್ದಾರೆ.ಈ ಮೂವರಲ್ಲಿ ಒಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.ಆದರೆ ಆಯ್ಕೆಯ ಜವಾಬ್ದಾರಿ ಹೊತ್ತಿರುವ ಹಿರಿಯರೊಬ್ಬರು, ಸದ್ಯಕ್ಕೆ ಏನನ್ನೂ ಹೇಳುವುದಿಲ್ಲ.ಚುನಾವಣೆಯ ದಿನದಂದು ಬೆಳಗ್ಗೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಸರ್ವರ ಸಮ್ಮತಿಯೊಂದಿಗೆ ಸೂಕ್ತ ವ್ಯಕ್ತಿಗೆ ಅಧ್ಯಕ್ಷರಾಗಲು ಸೂಚಿಸುವ ಬಯಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಮೂವರಲ್ಲಿ ಇಬ್ಬರಿಗೆ ಅಧ್ಯಕ್ಷ ಹುದ್ದೆಯ ಅವಧಿಯನ್ನು ಎರಡು ಅವಧಿಗೆ ವಿಭಜಿಸಿ ನೀಡುವ ಮೂಲಕ ಅಧಿಕಾರ ಹಂಚಿಕೆ ಸೂತ್ರ ಅನುಸರಿಸಲಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ.ಸಹಕಾರಿ ಕ್ಷೇತ್ರದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ,ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕರೂ ಆಗಿರುವ ಸತೀಶ ಓಸ್ವಾಲ್ ಅವರು ಬ್ಯಾಂಕಿಗೆ ಮಾರ್ಗದರ್ಶಕರಾಗಿರಲಿದ್ದು ಹೊಸಬರನ್ನು ಆಯ್ಕೆ ಮಾಡುವಲ್ಲಿ ಅವರ ಮಾತಿಗೂ ಪ್ರಾಶಸ್ತö್ಯ ಇರಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಒಟ್ಟಾರೆ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಒಂದು ತಿಂಗಳು ನಡೆದ ಚುನಾವಣೆಯ ಕೊನೆಯ ಘಟ್ಟ ತಲುಪಿದ್ದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮೂಲಕ ನಾಳೆ ತೆರೆ ಬೀಳಲಿದೆ.

ಮಹಿಳೆಯರ ಆಯ್ಕೆಯಾಗಿಲ್ಲ :
ಬ್ಯಾಂಕಿನ ಇತಿಹಾಸದಲ್ಲಿ ಈವರೆಗೂ ಮಹಿಳೆಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿಲ್ಲ.ಅಧ್ಯಕ್ಷ ಹುದ್ದೆ ಇರಲಿ, ಕೊನೆಯ ಪಕ್ಷ ಉಪಾಧ್ಯಕ್ಷ ಸ್ಥಾನಕ್ಕಾದರೂ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂಬ ಮಾತುಗಳು ಕೇಳಿ ಬಂದಿವೆ.ಒಟ್ಟಾರೆ ಹಿರಿಯರು ಕೈಗೊಳ್ಳುವ, ಆಯ್ಕೆಯಾದ ನಿರ್ದೇಶಕರ ಸಮ್ಮತಿಯಂತೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ