ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜ.೮ ರಂದು ನಡೆಯಲಿದೆ.
ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.ಹಿಂದಿನ ಅಧ್ಯಕ್ಷ ಸತೀಶ ಓಸ್ವಾಲ ಈಗಾಗಲೇ ಎರಡು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದು ಸಾಮಾನ್ಯ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆ ಇದೆ.

ಡಿಸಿಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇಲ್ಲ.ಊರಿನ ಹಿರಿಯರು ಈಗಾಗಲೇ ನನ್ನನ್ನು ಬ್ಯಾಂಕಿನ ಎರಡು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಮುಂಬರುವ ದಿನಗಳಲ್ಲಿ ಹಿರಿಯರ ಮಾತಿಗೆ ತಲೆಬಾಗಿ ಮುನ್ನಡೆಯುತ್ತೇನೆ ಎಂದು ಉತ್ತರಿಸಿದರು.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಸಂಗನಗೌಡ ಬಿರಾದಾರ(ಜಿಟಿಸಿ), ರಾಜಶೇಖರ ಕರಡ್ಡಿ ಹಾಗೂ ಪ್ರಭುರಾಜ ಕಲ್ಬುರ್ಗಿ ಇದ್ದಾರೆ.ಈ ಮೂವರಲ್ಲಿ ಒಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.ಆದರೆ ಆಯ್ಕೆಯ ಜವಾಬ್ದಾರಿ ಹೊತ್ತಿರುವ ಹಿರಿಯರೊಬ್ಬರು, ಸದ್ಯಕ್ಕೆ ಏನನ್ನೂ ಹೇಳುವುದಿಲ್ಲ.ಚುನಾವಣೆಯ ದಿನದಂದು ಬೆಳಗ್ಗೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಸರ್ವರ ಸಮ್ಮತಿಯೊಂದಿಗೆ ಸೂಕ್ತ ವ್ಯಕ್ತಿಗೆ ಅಧ್ಯಕ್ಷರಾಗಲು ಸೂಚಿಸುವ ಬಯಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಮೂವರಲ್ಲಿ ಇಬ್ಬರಿಗೆ ಅಧ್ಯಕ್ಷ ಹುದ್ದೆಯ ಅವಧಿಯನ್ನು ಎರಡು ಅವಧಿಗೆ ವಿಭಜಿಸಿ ನೀಡುವ ಮೂಲಕ ಅಧಿಕಾರ ಹಂಚಿಕೆ ಸೂತ್ರ ಅನುಸರಿಸಲಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ.ಸಹಕಾರಿ ಕ್ಷೇತ್ರದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ,ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕರೂ ಆಗಿರುವ ಸತೀಶ ಓಸ್ವಾಲ್ ಅವರು ಬ್ಯಾಂಕಿಗೆ ಮಾರ್ಗದರ್ಶಕರಾಗಿರಲಿದ್ದು ಹೊಸಬರನ್ನು ಆಯ್ಕೆ ಮಾಡುವಲ್ಲಿ ಅವರ ಮಾತಿಗೂ ಪ್ರಾಶಸ್ತö್ಯ ಇರಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಒಟ್ಟಾರೆ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಒಂದು ತಿಂಗಳು ನಡೆದ ಚುನಾವಣೆಯ ಕೊನೆಯ ಘಟ್ಟ ತಲುಪಿದ್ದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮೂಲಕ ನಾಳೆ ತೆರೆ ಬೀಳಲಿದೆ.

ಮಹಿಳೆಯರ ಆಯ್ಕೆಯಾಗಿಲ್ಲ :
ಬ್ಯಾಂಕಿನ ಇತಿಹಾಸದಲ್ಲಿ ಈವರೆಗೂ ಮಹಿಳೆಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿಲ್ಲ.ಅಧ್ಯಕ್ಷ ಹುದ್ದೆ ಇರಲಿ, ಕೊನೆಯ ಪಕ್ಷ ಉಪಾಧ್ಯಕ್ಷ ಸ್ಥಾನಕ್ಕಾದರೂ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂಬ ಮಾತುಗಳು ಕೇಳಿ ಬಂದಿವೆ.ಒಟ್ಟಾರೆ ಹಿರಿಯರು ಕೈಗೊಳ್ಳುವ, ಆಯ್ಕೆಯಾದ ನಿರ್ದೇಶಕರ ಸಮ್ಮತಿಯಂತೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು