Crime news: Child killed in husband-wife fight..!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

ಮಂಡ್ಯ: ಮಂಡ್ಯದಲ್ಲಿ ಗೃಹಿಣಿ ಅನುಮಾಸ್ಪದ ಸಾವನ್ನಪ್ಪಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಗಂಡನ ಮನೆಗೆ ಬೆಂಕಿ ಹಾಕಿರುವ ದುರ್ಘಟನೆ ಸಂಭವಿಸಿದೆ. (Sad news)

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಗದ್ದೆ ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಈ ನಡುವೆ ಸ್ವಾತಿ ಮನೆಗೆ ಸಂಬಂಧಿಕರು ಬೆಂಕಿಗೆ ಇಡುತ್ತಿದ್ದ ಹಾಗೇ ಗಂಡ ಮೋಹನ್‌ ಕೂಡ ಕರೆಗೆ ಹಾರಿ ಆತ್ಮಹತ್ಯೆ (Sad news) ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Join Our Telegram: https://t.me/dcgkannada

ಸದ್ಯ, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ