Actor darshan and pavitra gowda in murder case

ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

Ad
Ad

ಬೆಂಗಳೂರು: 3991 ಪುಟಗಳ ಸುದೀರ್ಘ ಚಾಜ್ ಶೀಟ್ ಸಲ್ಲಿಕೆಯ ಬೆನ್ನಲ್ಲೇ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಅರ್ಜಿ ರದ್ದಾಗುವುದು ಖಚಿತವಾಗಿದ್ದರೂ ಕಾನೂನು ಪ್ರಕ್ರಿಯೆ ಆರಂಭಿಸಲು ದರ್ಶನ್ ಪರ ವಕೀಲರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ಕಾರಾಗೃಹದಿಂದಲೇ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಡಿಯೊ ಕಾನ್ಸರನ್ಸ್ ಮೂಲಕ ತಾವಿದ್ದ ಕಾರಾಗೃಹಗಳಿಂದಲೇ ಸೋಮವಾರ ಹಾಜರಾಗಲಿದ್ದಾರೆ.

ಇದೇ ವೇಳೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ ಶೀಟ್ ಎಲ್ಲ 17 ಜನ ಆರೋಪಿಗಳ ಕೈ ಸೇರಲಿದೆ. ಚಾರ್ಜ್‌ ಶೀಟ್ ಕೈ ಸೇರಿದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ಸೋಮವಾರ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪವಿತ್ರಾ ಬಿಟ್ಟು ಯಾರೂ ಜಾಮೀನಿಗೆ ಅರ್ಜಿ ಹಾಕಿಲ್ಲ:

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆಯಾಗಿರುವ ಘಟನೆ ನಡೆದು ಮೂರು ತಿಂಗಳು ಕಳೆದಿವೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ 17 ಆರೋಪಿಗಳ ಬಂಧನವಾಗಿಯೂ ಮೂರು ತಿಂಗಳು ಕಳೆದಿದೆ. ಈ ನಡುವೆ ಪವಿತ್ರಾ ಗೌಡ ಬಿಟ್ಟು ಬೇರೆ 16 ಆರೋಪಿಗಳು ಒಮ್ಮೆಯೂ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ.

ಎ.1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರಾದರೂ ಅವರ ಜಾಮೀನು ಅರ್ಜಿ ವಜಾ ಆಗಿತ್ತು.

ಇದನ್ನೂ ಓದಿ: Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

ವಕಾಲತ್ತಿಗೆ ಸಹಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಇಂದು ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಈಗಾಗಲೇ ಪತ್ನಿ ಹಾಗೂ ಸಹೋದರ ದಿನಕರ್ ಜತೆ ದರ್ಶನ್ ಅವರು ಚರ್ಚೆ ನಡೆಸಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಪತ್ನಿ ಹಾಗೂ ಸಹೋದರ ಜತೆ ಚರ್ಚೆ ಮಾಡಿದ ಬಳಿಕ ದರ್ಶನ್ ವಕಾಲತ್ತಿಗೆ ಸಹಿ ಹಾಕಿದ್ದರು ಎನ್ನಲಾಗಿದೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,