ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಬಳಿ ಅನುಮತಿ ನೀಡಲು ಒತ್ತಾಯಪಡಿಸಿ ಕೆಲಸ ಮಾಡಿಸಿಕೊಂಡು ಬಂದಿದ್ದೇನೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಮತಕ್ಷೇತ್ರದ ವನಹಳ್ಳಿ ಗ್ರಾಮದಲ್ಲಿ ಸನ್ 2022-23ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ವನಹಳ್ಳಿ-ಬಳಗಾನೂರ ಕಾಲುವೆ ರಸ್ತೆಯ ಸುಧಾರಣೆ ಕಾಮಗಾರಿಗೆ ಚಾಲನೆ ನಿಡಿ ಅವರು ಮಾತನಾಡಿದರು.

ಇದರಲ್ಲಿ ರಾಜಕೀಯ ದುರುದ್ದೇಶ ಮಾಡಿಲ್ಲ.ಹಿಂದಿನ ಶಾಸಕರು ಮಾಡಿರುವ ಯೋಜನೆಗಳನ್ನು ತಡೆಯುವ ಕೆಲಸ ಮಾಡುವುದಿಲ್ಲ.ಆಡಳಿತಾತ್ಮಕ ಮಂಜೂರಾತಿ 2024 ರಲ್ಲಿ ಕೊಡಿಸಿದ್ದೇವೆ.ಕೆಲಸ ಆರಂಭಿಸಬೇಕಿತ್ತು . ಆದರೆ ಗುತ್ತಿಗೆದಾರರು ಏಕೆ ಮಾಡಲಿಲ್ಲ ಎಂಬುದು ಗೊತ್ತಿಲ್ಲ.ಇಲಾಖೆ ಹಾಗೂ ಗುತ್ತಿಗೆದಾರರ ಮಧ್ಯೆ ಪ್ರವೇಶ ಮಾಡುವುದಿಲ್ಲ.ಇದರಲ್ಲಿ ರಾಜಕಾರಣ ಮಾಡಬೇಕಾಗಿಲ್ಲ.3.41 ಕೋಟಿ ರೂ. ವೆಚ್ಚದಲ್ಲಿ ಕೆಲಸ ಮಾಡಬೇಕಾಗುತ್ತದೆ.ಅಂದಾಜು 4 ಕಿಮೀ ರಸ್ತೆ ಮಾಡಬೇಕಾಗಿದೆ.ರಸ್ತೆ ಆದರೆ ರೈತರಿಗೆ ಅನುಕೂಲವಾಗಲಿದ್ದು ರೈತರು ಅಡಚಣೆ ಮಾಡಬಾರದು.ಎಲ್ಲೆಲ್ಲಿ ರಸ್ತೆಗಳಾಗಿದೆಯೋ ಅಲ್ಲಲ್ಲಿ ಜಮೀನುಗಳ ಬೆಲೆ ಹೆಚ್ಚಳವಾಗುತ್ತದೆ ಎಂದರು.

ಸಿದ್ಧರಾಮಯ್ಯನವರ ಸರ್ಕಾರದಿಂದ ಬರುವ ತಿಂಗಳಲ್ಲಿ ಐದು ಕೆಜಿ ಅಕ್ಕಿ ನೀಡುತ್ತಿದ್ದು ಉಳಿದಿದ್ದು ಕಿಟ್ ರೂಪದಲ್ಲಿ ಹಂಚಿಕೆ ಮಾಡಲಾಗುತ್ತದೆ.ನನ್ನ ಶಾಸಕತ್ವದ ಅವಧಿಯಲ್ಲಿ 18 ಸಾವಿರ ಮನೆಗಳನ್ನು ಕೊಟ್ಟಿದ್ದೇವೆ.ಇನ್ನೂ ಮನೆಗಳು ಬೇಕು ಎಂಬ ಬೇಡಿಕೆ ಇದೆ.ಮತಕ್ಷೇತ್ರದಲ್ಲಿ ಪಿಎಂಜಿಎಸ್‌ವೈ ಅಡಿ 31 ಕಿ.ಮೀ ರಸ್ತೆ ಮಾಡುತ್ತಿದೆ. 15 ಕೋಟಿ ಗ್ರಾಮೀಣ ರಸ್ತೆ, 20 ಕೋಟಿ ರೂ.ಪಿಡಿಬ್ಲ್ಯುಡಿ, ಒಂದು ಕೋಟಿ ರೂ.ಶಾಲಾ ದುರಸ್ತಿಗೆ ನೀಡಲಾಗಿದೆ.ಸಮುದಾಯ ಭವನಗಳಿಗೆ 4.50 ಕೋಟಿ ನೀಡಿದ್ದೇನೆ.ಶಾಸಕರ ವಿವೇಚನಾ ಕೋಟಾದಲ್ಲಿ 50 ಕೋಟಿ ರೂ.ನೀಡಿದ್ದು ಕೆಲಸಗಳು ಆರಂಭವಾಗುತ್ತವೆ ಎಂದರು.

ನಾವು ಧ್ಚಜ ಕಟ್ಟಿ,ಬಣ್ಣ ಹಚ್ಚಿಕೊಂಡು ಅಡ್ಡಾಡಿ ಎನ್ನುವುದಿಲ್ಲ.ನಾವು ಬದುಕು ಕಟ್ಟಿಕೊಳ್ಳಿ ಎಂದು ಯೋಜನೆಗಳನ್ನು ರೂಪಿಸಿದ್ದೇವೆ.ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದರು.

ಶಕ್ತಿ,ಗೃಹಲಕ್ಷ್ಮೀ ಯೋಜನೆಯಿಂದ ಹೆಣ್ಣು ಮಕ್ಕಳಿಗೆ ಸ್ವಾಭಿಮಾನ,ಧೈರ್ಯ ಬಂದಿದೆ ಎಂದರು.ಗ್ರಾಮದ ಮುಖಂಡರಾದ ಮಲ್ಲನಗೌಡ ಕಾಮರೆಡ್ಡಿ, ಬಸನಗೌಡ ಮೇಟಿ,ಬಸನಗೌಡ ಬಸರಕೋಡ
ಸಂಗನಗೌಡ ಬಿರಾದಾರ,ಬಸಯ್ಯ ಹಿರೇಮಠ,ಶಾಂತಕುಮಾರ ಚಟ್ಟೇರ, ಅಯ್ಯನಗೌಡ ನಾಡಗೌಡ,ಬಾವೂರ ಗ್ರಾಪಂ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಪಿಎಂಜಿಎಸ್‌ವೈ ಎಇಇ ಜ್ಞಾನೇಶ ಮುರಾಳ,ಶೇಖರಯ್ಯ ಹಿರೇಮಠ,ಪಿ.ಎಂ.ಜಿ.ಎಸ್.ವೈ ಎಇ ಪ್ರವೀಣ ರಾಠೋಡ ಇದ್ದರು.ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಬಳಿ ಅನುಮತಿ ನೀಡಲು ಒತ್ತಾಯಪಡಿಸಿ ಕೆಲಸ ಮಾಡಿಸಿಕೊಂಡು ಬಂದಿದ್ದೇನೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಮತಕ್ಷೇತ್ರದ ವನಹಳ್ಳಿ ಗ್ರಾಮದಲ್ಲಿ ಸನ್ 2022-23ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ವನಹಳ್ಳಿ-ಬಳಗಾನೂರ ಕಾಲುವೆ ರಸ್ತೆಯ ಸುಧಾರಣೆ ಕಾಮಗಾರಿಗೆ ಚಾಲನೆ ನಿಡಿ ಅವರು ಮಾತನಾಡಿದರು.

ಇದರಲ್ಲಿ ರಾಜಕೀಯ ದುರುದ್ದೇಶ ಮಾಡಿಲ್ಲ.ಹಿಂದಿನ ಶಾಸಕರು ಮಾಡಿರುವ ಯೋಜನೆಗಳನ್ನು ತಡೆಯುವ ಕೆಲಸ ಮಾಡುವುದಿಲ್ಲ.ಆಡಳಿತಾತ್ಮಕ ಮಂಜೂರಾತಿ 2024 ರಲ್ಲಿ ಕೊಡಿಸಿದ್ದೇವೆ.ಕೆಲಸ ಆರಂಭಿಸಬೇಕಿತ್ತು . ಆದರೆ ಗುತ್ತಿಗೆದಾರರು ಏಕೆ ಮಾಡಲಿಲ್ಲ ಎಂಬುದು ಗೊತ್ತಿಲ್ಲ.ಇಲಾಖೆ ಹಾಗೂ ಗುತ್ತಿಗೆದಾರರ ಮಧ್ಯೆ ಪ್ರವೇಶ ಮಾಡುವುದಿಲ್ಲ.ಇದರಲ್ಲಿ ರಾಜಕಾರಣ ಮಾಡಬೇಕಾಗಿಲ್ಲ.3.41 ಕೋಟಿ ರೂ. ವೆಚ್ಚದಲ್ಲಿ ಕೆಲಸ ಮಾಡಬೇಕಾಗುತ್ತದೆ.ಅಂದಾಜು 4 ಕಿಮೀ ರಸ್ತೆ ಮಾಡಬೇಕಾಗಿದೆ.ರಸ್ತೆ ಆದರೆ ರೈತರಿಗೆ ಅನುಕೂಲವಾಗಲಿದ್ದು ರೈತರು ಅಡಚಣೆ ಮಾಡಬಾರದು.ಎಲ್ಲೆಲ್ಲಿ ರಸ್ತೆಗಳಾಗಿದೆಯೋ ಅಲ್ಲಲ್ಲಿ ಜಮೀನುಗಳ ಬೆಲೆ ಹೆಚ್ಚಳವಾಗುತ್ತದೆ ಎಂದರು.

ಸಿದ್ಧರಾಮಯ್ಯನವರ ಸರ್ಕಾರದಿಂದ ಬರುವ ತಿಂಗಳಲ್ಲಿ ಐದು ಕೆಜಿ ಅಕ್ಕಿ ನೀಡುತ್ತಿದ್ದು ಉಳಿದಿದ್ದು ಕಿಟ್ ರೂಪದಲ್ಲಿ ಹಂಚಿಕೆ ಮಾಡಲಾಗುತ್ತದೆ.ನನ್ನ ಶಾಸಕತ್ವದ ಅವಧಿಯಲ್ಲಿ 18 ಸಾವಿರ ಮನೆಗಳನ್ನು ಕೊಟ್ಟಿದ್ದೇವೆ.ಇನ್ನೂ ಮನೆಗಳು ಬೇಕು ಎಂಬ ಬೇಡಿಕೆ ಇದೆ.ಮತಕ್ಷೇತ್ರದಲ್ಲಿ ಪಿಎಂಜಿಎಸ್‌ವೈ ಅಡಿ 31 ಕಿ.ಮೀ ರಸ್ತೆ ಮಾಡುತ್ತಿದೆ. 15 ಕೋಟಿ ಗ್ರಾಮೀಣ ರಸ್ತೆ, 20 ಕೋಟಿ ರೂ.ಪಿಡಿಬ್ಲ್ಯುಡಿ, ಒಂದು ಕೋಟಿ ರೂ.ಶಾಲಾ ದುರಸ್ತಿಗೆ ನೀಡಲಾಗಿದೆ.ಸಮುದಾಯ ಭವನಗಳಿಗೆ 4.50 ಕೋಟಿ ನೀಡಿದ್ದೇನೆ.ಶಾಸಕರ ವಿವೇಚನಾ ಕೋಟಾದಲ್ಲಿ 50 ಕೋಟಿ ರೂ.ನೀಡಿದ್ದು ಕೆಲಸಗಳು ಆರಂಭವಾಗುತ್ತವೆ ಎಂದರು.

ನಾವು ಧ್ಚಜ ಕಟ್ಟಿ,ಬಣ್ಣ ಹಚ್ಚಿಕೊಂಡು ಅಡ್ಡಾಡಿ ಎನ್ನುವುದಿಲ್ಲ.ನಾವು ಬದುಕು ಕಟ್ಟಿಕೊಳ್ಳಿ ಎಂದು ಯೋಜನೆಗಳನ್ನು ರೂಪಿಸಿದ್ದೇವೆ.ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದರು.

ಶಕ್ತಿ,ಗೃಹಲಕ್ಷ್ಮೀ ಯೋಜನೆಯಿಂದ ಹೆಣ್ಣು ಮಕ್ಕಳಿಗೆ ಸ್ವಾಭಿಮಾನ,ಧೈರ್ಯ ಬಂದಿದೆ ಎಂದರು.ಗ್ರಾಮದ ಮುಖಂಡರಾದ ಮಲ್ಲನಗೌಡ ಕಾಮರೆಡ್ಡಿ, ಬಸನಗೌಡ ಮೇಟಿ,ಬಸನಗೌಡ ಬಸರಕೋಡ
ಸಂಗನಗೌಡ ಬಿರಾದಾರ,ಬಸಯ್ಯ ಹಿರೇಮಠ,ಶಾಂತಕುಮಾರ ಚಟ್ಟೇರ, ಅಯ್ಯನಗೌಡ ನಾಡಗೌಡ,ಬಾವೂರ ಗ್ರಾಪಂ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಪಿಎಂಜಿಎಸ್‌ವೈ ಎಇಇ ಜ್ಞಾನೇಶ ಮುರಾಳ,ಶೇಖರಯ್ಯ ಹಿರೇಮಠ,ಪಿ.ಎಂ.ಜಿ.ಎಸ್.ವೈ ಎಇ ಪ್ರವೀಣ ರಾಠೋಡ ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ