ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು.

ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿ ಹಿರಿಯ ಸದಸ್ಯ ಬಸವರಾಜ ನಂದಿಕೇಶ್ವರಮಠ ಮಾತನಾಡಿ, ಹಿಂದಿನ ಕಾಲದಲ್ಲಿ ಸೇನೆಯಲ್ಲಿ ಮಹಿಳೆಯರಿಗೆ ಆದ್ಯತೆ ಕೊಟ್ಟಿದ್ದು ಝಾನ್ಸಿರಾಣಿ ಲಕ್ಷ್ಮೀಬಾಯಿ. ಅದೇ ರೀತಿ ಮುದ್ದೇಬಿಹಾಳ ತಾಲ್ಲೂಕಿನ ಪ್ರಥಮ ಮಹಿಳೆಯಾಗಿ ಬಿಎಸ್‌ಎಫ್‌ಗೆ ಸೇರ್ಪಡೆಯಾಗಿರುವ ಆಯೇಷಾ ವಾಲೀಕಾರ ಸಾಧನೆ ನಮಗೆಲ್ಲ ಮಾದರಿಯಾಗಿದೆ.ಕಾರ್ಗಿಲ್ ಸ್ಮಾರಕದ ಮೈದಾನದಲ್ಲಿ ಹುತಾತ್ಮರಾದವರು,ಸೇವೆ ಮುಗಿಸಿಕೊಂಡು ವಾಪಸ್ ಆದವರನ್ನು ಗೌರವಿಸುವ ಸಂಪ್ರದಾಯದ ಜೊತೆಗೆ ಈಗ ಬಿಎಸ್‌ಎಫ್‌ಗೆ ಸೇರ್ಪಡೆಯಾಗಿರುವ ಮಹಿಳೆಯನ್ನು ಗೌರವಿಸುವ ಸಂಪ್ರದಾಯ ಆರಂಭವಾಗಿರುವುದು ಖುಷಿಯ ಸಂಗತಿ ಎಂದರು.

ಎಎಸ್‌ಐ ಕೆ.ಎಸ್.ಅಸ್ಕಿ ಮಾತನಾಡಿ, ನಮ್ಮೂರಿನ ಯುವತಿಯೊಬ್ಬಳು ಇಡೀ ಜಿಲ್ಲೆಯೇ ಮೆಚ್ಚುವ ಸಾಧನೆ ತೋರಿರುವುದು ಖುಷಿಯ ಸಂಗತಿ.ಬಡತನವನ್ನು ಮೆಟ್ಟಿ ನಿಂತು ಸೇನೆಗೆ ಸೇರಿರುವುದು ಸಣ್ಣ ಮಾತಲ್ಲ.ಅವರಿಗೆ ಇಲಾಖೆಯಿಂದ ಅಭಿನಂದಿಸುವೆ ಎಂದರು.

ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಆಯೇಷಾ ವಾಲೀಕಾರ ಮಾತನಾಡಿ, ಈ ಸಾಧನೆ,ಮೆರವಣಿಗೆ ನನ್ನ ತಂದೆ,ತಾಯಿ ಹಾಗೂ ಸಹೋದರನಿಗೆ ಸಲ್ಲಬೇಕು.ಬಡತನಕ್ಕೆ ಈ ಗೌರವ ದೊರೆಯುತ್ತಿದೆ.ಬಡತನ ಇದೆ ಎಂದು ದೊಡ್ಡ ಕನಸು ಕಾಣುವುದನ್ನು ಬಿಡಬೇಡಿ.ಉನ್ನತ ಕನಸುಗಳನ್ನಿಟ್ಟು ಕಷ್ಟಪಟ್ಟು ಓದಿ ನಿಶ್ಚಿತವಾಗಿಯೂ ಗುರಿ ಸಾಧನೆ ಸಾಧ್ಯವಾಗುತ್ತದೆ ಎಂದರು.

ಆಯೇಷಾ ಅವರ ತಂದೆ ಬಂದಗೀಸಾ ವಾಲೀಕಾರ, ತಾಯಿ ಶಾಕೀರಾ ವಾಲೀಕಾರ ಅವರನ್ನು ಸಮೀತಿಯ ಪದಾಧಿಕಾರಿಗಳು ತವರಿನ ಗೌರವದ ಸಂಕೇತವಾಗಿ ಸೀರೆ,ಬಳೆ,ಹೂವು ನೀಡಿ ಸನ್ಮಾನಿಸಿ ಅಭಿನಂದಿಸಿದರು.ನಿವೃತ್ತ ಸೈನಿಕ ಚಿದಾನಂದ ಬಿರಾದಾರ,ಮಾಜಿ ಸೈನಿಕ ಸೋಮಶೇಖರ ಚಿರಲದಿನ್ನಿ,ಸಮೀತಿಯ ಅಧ್ಯಕ್ಷ ಶ್ರೀಕಾಂತ ಹಿರೇಮಠ ಇದ್ದರು.ಚಂದ್ರಶೇಖರ ಕಲಾಲ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ,ಅಮಾನತ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ, ನದಾಫ-ಪಿಂಜಾರ್ ಸೇವಾ

ಸಂಘ,ಗoಗಾಮಾತಾ ಪತ್ತಿನ ಸಹಕಾರಿ ಸಂಘ ಹಾಗೂ ಮುಖಂಡರು,ಗಣ್ಯರು ಸನ್ಮಾನಿಸಲಾಯಿತು.
ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಇದ್ದರು.
ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ತೆರೆದ ಜೀಪಿನಲ್ಲಿ ಆಯೇಷಾ ವಾಲೀಕಾರ ಅವರನ್ನು ಮೆರವಣಿಗೆ ನಡೆಸಲಾಯಿತು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.