ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು.

ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿ ಹಿರಿಯ ಸದಸ್ಯ ಬಸವರಾಜ ನಂದಿಕೇಶ್ವರಮಠ ಮಾತನಾಡಿ, ಹಿಂದಿನ ಕಾಲದಲ್ಲಿ ಸೇನೆಯಲ್ಲಿ ಮಹಿಳೆಯರಿಗೆ ಆದ್ಯತೆ ಕೊಟ್ಟಿದ್ದು ಝಾನ್ಸಿರಾಣಿ ಲಕ್ಷ್ಮೀಬಾಯಿ. ಅದೇ ರೀತಿ ಮುದ್ದೇಬಿಹಾಳ ತಾಲ್ಲೂಕಿನ ಪ್ರಥಮ ಮಹಿಳೆಯಾಗಿ ಬಿಎಸ್‌ಎಫ್‌ಗೆ ಸೇರ್ಪಡೆಯಾಗಿರುವ ಆಯೇಷಾ ವಾಲೀಕಾರ ಸಾಧನೆ ನಮಗೆಲ್ಲ ಮಾದರಿಯಾಗಿದೆ.ಕಾರ್ಗಿಲ್ ಸ್ಮಾರಕದ ಮೈದಾನದಲ್ಲಿ ಹುತಾತ್ಮರಾದವರು,ಸೇವೆ ಮುಗಿಸಿಕೊಂಡು ವಾಪಸ್ ಆದವರನ್ನು ಗೌರವಿಸುವ ಸಂಪ್ರದಾಯದ ಜೊತೆಗೆ ಈಗ ಬಿಎಸ್‌ಎಫ್‌ಗೆ ಸೇರ್ಪಡೆಯಾಗಿರುವ ಮಹಿಳೆಯನ್ನು ಗೌರವಿಸುವ ಸಂಪ್ರದಾಯ ಆರಂಭವಾಗಿರುವುದು ಖುಷಿಯ ಸಂಗತಿ ಎಂದರು.

ಎಎಸ್‌ಐ ಕೆ.ಎಸ್.ಅಸ್ಕಿ ಮಾತನಾಡಿ, ನಮ್ಮೂರಿನ ಯುವತಿಯೊಬ್ಬಳು ಇಡೀ ಜಿಲ್ಲೆಯೇ ಮೆಚ್ಚುವ ಸಾಧನೆ ತೋರಿರುವುದು ಖುಷಿಯ ಸಂಗತಿ.ಬಡತನವನ್ನು ಮೆಟ್ಟಿ ನಿಂತು ಸೇನೆಗೆ ಸೇರಿರುವುದು ಸಣ್ಣ ಮಾತಲ್ಲ.ಅವರಿಗೆ ಇಲಾಖೆಯಿಂದ ಅಭಿನಂದಿಸುವೆ ಎಂದರು.

ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಆಯೇಷಾ ವಾಲೀಕಾರ ಮಾತನಾಡಿ, ಈ ಸಾಧನೆ,ಮೆರವಣಿಗೆ ನನ್ನ ತಂದೆ,ತಾಯಿ ಹಾಗೂ ಸಹೋದರನಿಗೆ ಸಲ್ಲಬೇಕು.ಬಡತನಕ್ಕೆ ಈ ಗೌರವ ದೊರೆಯುತ್ತಿದೆ.ಬಡತನ ಇದೆ ಎಂದು ದೊಡ್ಡ ಕನಸು ಕಾಣುವುದನ್ನು ಬಿಡಬೇಡಿ.ಉನ್ನತ ಕನಸುಗಳನ್ನಿಟ್ಟು ಕಷ್ಟಪಟ್ಟು ಓದಿ ನಿಶ್ಚಿತವಾಗಿಯೂ ಗುರಿ ಸಾಧನೆ ಸಾಧ್ಯವಾಗುತ್ತದೆ ಎಂದರು.

ಆಯೇಷಾ ಅವರ ತಂದೆ ಬಂದಗೀಸಾ ವಾಲೀಕಾರ, ತಾಯಿ ಶಾಕೀರಾ ವಾಲೀಕಾರ ಅವರನ್ನು ಸಮೀತಿಯ ಪದಾಧಿಕಾರಿಗಳು ತವರಿನ ಗೌರವದ ಸಂಕೇತವಾಗಿ ಸೀರೆ,ಬಳೆ,ಹೂವು ನೀಡಿ ಸನ್ಮಾನಿಸಿ ಅಭಿನಂದಿಸಿದರು.ನಿವೃತ್ತ ಸೈನಿಕ ಚಿದಾನಂದ ಬಿರಾದಾರ,ಮಾಜಿ ಸೈನಿಕ ಸೋಮಶೇಖರ ಚಿರಲದಿನ್ನಿ,ಸಮೀತಿಯ ಅಧ್ಯಕ್ಷ ಶ್ರೀಕಾಂತ ಹಿರೇಮಠ ಇದ್ದರು.ಚಂದ್ರಶೇಖರ ಕಲಾಲ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ,ಅಮಾನತ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ, ನದಾಫ-ಪಿಂಜಾರ್ ಸೇವಾ

ಸಂಘ,ಗoಗಾಮಾತಾ ಪತ್ತಿನ ಸಹಕಾರಿ ಸಂಘ ಹಾಗೂ ಮುಖಂಡರು,ಗಣ್ಯರು ಸನ್ಮಾನಿಸಲಾಯಿತು.
ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಇದ್ದರು.
ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ತೆರೆದ ಜೀಪಿನಲ್ಲಿ ಆಯೇಷಾ ವಾಲೀಕಾರ ಅವರನ್ನು ಮೆರವಣಿಗೆ ನಡೆಸಲಾಯಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ