ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ ಸಿಬ್ಬಂದಿ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಿಢೀರ್ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಸ್ಥಳಿಯ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ಹುಡೇದ ಎಂಬುವರೇ ಮಾತ್ರೆ ಸೇವಿಸಿ ಪ್ರಾಣ ಬಿಡಲು ಯತ್ನಿಸಿದವರು ಎಂದು ತಿಳಿದು ಬಂದಿದೆ.ತಕ್ಷಣ ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಸಿಬ್ಬಂದಿ ಅವರನ್ನು ಮುದ್ದೇಬಿಹಾಳದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆ ವಿವರ : ಸುಮಾರು ಒಂದು ವರ್ಷದಿಂದಲೂ ಸ್ಥಳಿಯ ವ್ಯಕ್ತಿಯೋರ್ವ 2-3 ದಿನಕ್ಕೊಮ್ಮೆ ರಾತ್ರಿ ಹಗಲು ಎನ್ನದೇ ತಾವು ಕರ್ತವ್ಯ ನಿರ್ವಹಿಸುವ ವೇಳೆ ಏಕಾಏಕಿ ಬಂದು ವಿಡಿಯೋ ಚಿತ್ರೀಕರಿಸಿ ಸಾಮಾಜೀಕ ಜಾಲತಾಣ ಹಾಗೂ ಅಧಿಕಾರಿಗಳಿಗೆ ಹರಿ ಬಿಟ್ಟು ಭಯ ಹುಟ್ಟಿಸುತ್ತಿದ್ದ ಎಂದು ಆರೋಪಿಸಲಾಗಿದ್ದು ಕುಸುಮಾ ಅವರನ್ನು ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಹೊರ ಗುತ್ತಿಗೆಯ ಸಂಸ್ಥೆಯವರಿಗೂ ಸಹ ಪತ್ರ ಬರೆದಿದ್ದ ಎನ್ನಲಾಗಿದೆ.ಗುತ್ತಿಗೆ ಸಂಸ್ಥೆಯವರು ಕುಸುಮಾ ಅವರಿಗೆ ಕೆಲಸದಿಂದ ವಜಾ ಮಾಡಿ ಪತ್ರವೂ ನೀಡಿದ್ದರು. ಅತ್ತ ಮಾತ್ರೆ ನುಂಗಿದ ಘಟನೆ ಹಿಂದಿನ ದಿನವಷ್ಟೇ ಪೋಲೀಯೋ ಲಸಿಕೆ ದಿನವೂ ಬಂದು ವಿನಃ ಕಾರಣ ಸಂತ್ರಸ್ತೆ ಕುಸುಮಾ ಕೆಲಸ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿದ್ದ ಎನ್ನಲಾಗಿದೆ.

ನಾನು 10 ವರ್ಷದಿಂದ ಕೆಲಸ ಮಾಡುತ್ತಿದ್ದೆ.ಆದರೆ ಯಾವುದೇ ಆರೋಪಗಳಿಲ್ಲದೇ ನನ್ನನ್ನು ವಜಾ ಮಾಡುತ್ತಿದ್ದಾರೆ ಎನ್ನುವ ಕಿರುಕುಳಕ್ಕೆ ಬೇಸತ್ತ ಕುಸುಮಾ ಮಾತ್ರೆ ಸೇವನೆ ಮಾಡಿದ್ದಾಳೆ ಎಂದು ಅವರ ಸಂಬAಧಿಕರು ಆರೋಪಿಸಿದ್ದಾರೆ.
ಮೇಲಿಂದ ಮೇಲೆ ವಿಡಿಯೋ ಚಿತ್ರೀಕರಣ ಮಾಡುವ ಪರಿಣಾಮ ನಮಗೆ ರಕ್ಷಣೆ ಇಲ್ಲದಂತಾಗಿದೆ, ಎಲ್ಲರ ಕರ್ತವ್ಯಕ್ಕೂ ಸಹ ಅಡಚಣೆ ಉಂಟು ಮಾಡುತ್ತಿದ್ದಾನೆ.ಮಾತೆತ್ತಿದರೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃ ಚೌಧರಿ ಅವರ ಹೆಸರು ಹೇಳಿ ಬೆದರಿಸುತ್ತಿದ್ದಾನೆ.ನಾವು ಇಲ್ಲಿ ಕರ್ತವ್ಯ ಮಾಡುವುದಿಲ್ಲ ಎಂದು ಆಸ್ಪತ್ರೆಯ ಹೊರ ಭಾಗದಲ್ಲಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳ ಭೇಟಿ: ಘಟನೆ ಅರಿತ ತಹಶೀಲ್ದಾರ ಕೀರ್ತಿ ಚಾಲಕ, ಟಿಎಚ್‌ಓ ಡಾ.ಸತೀಶ ತಿವಾರಿ, ಪಿಎಸ್‌ಐ ಸಂಜಯ್ ತಿಪರೆಡ್ಡಿ,ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ, ಪ.ಪಂ ಸಿಓ ಪ್ರಶಾಂತ್ ಸಿ., ಮತ್ತಿತರರು ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.ಅಲ್ಲದೇ ಆರೋಪಿ ಯಾರೇ ಇರಲಿ ತಾವು ಪ್ರಕರಣ ದಾಖಲಿಸಿದರೆ ಬಂಧಿಸುತ್ತೇವೆ.ಪ್ರತಿಭಟನೆ ಕೈ ಬಿಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮನವಿ ಮಾಡಿಕೊಂಡ ನಂತರ ಪ್ರತಿಭಟನೆ ಕೈಬಿಟ್ಟಿದ್ದಾರೆ.ಆದರೆ ಘಟನೆಗೆ ಸಂಬAಧಿಸಿದAತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಪಿಎಸೈ ಸಂಜಯ ತಿಪರೆಡ್ಡಿ ಮಾಹಿತಿ ನೀಡಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ