ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ ಸಿಬ್ಬಂದಿ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಿಢೀರ್ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಸ್ಥಳಿಯ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ಹುಡೇದ ಎಂಬುವರೇ ಮಾತ್ರೆ ಸೇವಿಸಿ ಪ್ರಾಣ ಬಿಡಲು ಯತ್ನಿಸಿದವರು ಎಂದು ತಿಳಿದು ಬಂದಿದೆ.ತಕ್ಷಣ ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಸಿಬ್ಬಂದಿ ಅವರನ್ನು ಮುದ್ದೇಬಿಹಾಳದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆ ವಿವರ : ಸುಮಾರು ಒಂದು ವರ್ಷದಿಂದಲೂ ಸ್ಥಳಿಯ ವ್ಯಕ್ತಿಯೋರ್ವ 2-3 ದಿನಕ್ಕೊಮ್ಮೆ ರಾತ್ರಿ ಹಗಲು ಎನ್ನದೇ ತಾವು ಕರ್ತವ್ಯ ನಿರ್ವಹಿಸುವ ವೇಳೆ ಏಕಾಏಕಿ ಬಂದು ವಿಡಿಯೋ ಚಿತ್ರೀಕರಿಸಿ ಸಾಮಾಜೀಕ ಜಾಲತಾಣ ಹಾಗೂ ಅಧಿಕಾರಿಗಳಿಗೆ ಹರಿ ಬಿಟ್ಟು ಭಯ ಹುಟ್ಟಿಸುತ್ತಿದ್ದ ಎಂದು ಆರೋಪಿಸಲಾಗಿದ್ದು ಕುಸುಮಾ ಅವರನ್ನು ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಹೊರ ಗುತ್ತಿಗೆಯ ಸಂಸ್ಥೆಯವರಿಗೂ ಸಹ ಪತ್ರ ಬರೆದಿದ್ದ ಎನ್ನಲಾಗಿದೆ.ಗುತ್ತಿಗೆ ಸಂಸ್ಥೆಯವರು ಕುಸುಮಾ ಅವರಿಗೆ ಕೆಲಸದಿಂದ ವಜಾ ಮಾಡಿ ಪತ್ರವೂ ನೀಡಿದ್ದರು. ಅತ್ತ ಮಾತ್ರೆ ನುಂಗಿದ ಘಟನೆ ಹಿಂದಿನ ದಿನವಷ್ಟೇ ಪೋಲೀಯೋ ಲಸಿಕೆ ದಿನವೂ ಬಂದು ವಿನಃ ಕಾರಣ ಸಂತ್ರಸ್ತೆ ಕುಸುಮಾ ಕೆಲಸ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿದ್ದ ಎನ್ನಲಾಗಿದೆ.

ನಾನು 10 ವರ್ಷದಿಂದ ಕೆಲಸ ಮಾಡುತ್ತಿದ್ದೆ.ಆದರೆ ಯಾವುದೇ ಆರೋಪಗಳಿಲ್ಲದೇ ನನ್ನನ್ನು ವಜಾ ಮಾಡುತ್ತಿದ್ದಾರೆ ಎನ್ನುವ ಕಿರುಕುಳಕ್ಕೆ ಬೇಸತ್ತ ಕುಸುಮಾ ಮಾತ್ರೆ ಸೇವನೆ ಮಾಡಿದ್ದಾಳೆ ಎಂದು ಅವರ ಸಂಬAಧಿಕರು ಆರೋಪಿಸಿದ್ದಾರೆ.
ಮೇಲಿಂದ ಮೇಲೆ ವಿಡಿಯೋ ಚಿತ್ರೀಕರಣ ಮಾಡುವ ಪರಿಣಾಮ ನಮಗೆ ರಕ್ಷಣೆ ಇಲ್ಲದಂತಾಗಿದೆ, ಎಲ್ಲರ ಕರ್ತವ್ಯಕ್ಕೂ ಸಹ ಅಡಚಣೆ ಉಂಟು ಮಾಡುತ್ತಿದ್ದಾನೆ.ಮಾತೆತ್ತಿದರೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃ ಚೌಧರಿ ಅವರ ಹೆಸರು ಹೇಳಿ ಬೆದರಿಸುತ್ತಿದ್ದಾನೆ.ನಾವು ಇಲ್ಲಿ ಕರ್ತವ್ಯ ಮಾಡುವುದಿಲ್ಲ ಎಂದು ಆಸ್ಪತ್ರೆಯ ಹೊರ ಭಾಗದಲ್ಲಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳ ಭೇಟಿ: ಘಟನೆ ಅರಿತ ತಹಶೀಲ್ದಾರ ಕೀರ್ತಿ ಚಾಲಕ, ಟಿಎಚ್‌ಓ ಡಾ.ಸತೀಶ ತಿವಾರಿ, ಪಿಎಸ್‌ಐ ಸಂಜಯ್ ತಿಪರೆಡ್ಡಿ,ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ, ಪ.ಪಂ ಸಿಓ ಪ್ರಶಾಂತ್ ಸಿ., ಮತ್ತಿತರರು ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.ಅಲ್ಲದೇ ಆರೋಪಿ ಯಾರೇ ಇರಲಿ ತಾವು ಪ್ರಕರಣ ದಾಖಲಿಸಿದರೆ ಬಂಧಿಸುತ್ತೇವೆ.ಪ್ರತಿಭಟನೆ ಕೈ ಬಿಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮನವಿ ಮಾಡಿಕೊಂಡ ನಂತರ ಪ್ರತಿಭಟನೆ ಕೈಬಿಟ್ಟಿದ್ದಾರೆ.ಆದರೆ ಘಟನೆಗೆ ಸಂಬAಧಿಸಿದAತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಪಿಎಸೈ ಸಂಜಯ ತಿಪರೆಡ್ಡಿ ಮಾಹಿತಿ ನೀಡಿದ್ದಾರೆ.

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ