ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ ಸಿಬ್ಬಂದಿ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಿಢೀರ್ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಸ್ಥಳಿಯ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ಹುಡೇದ ಎಂಬುವರೇ ಮಾತ್ರೆ ಸೇವಿಸಿ ಪ್ರಾಣ ಬಿಡಲು ಯತ್ನಿಸಿದವರು ಎಂದು ತಿಳಿದು ಬಂದಿದೆ.ತಕ್ಷಣ ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಸಿಬ್ಬಂದಿ ಅವರನ್ನು ಮುದ್ದೇಬಿಹಾಳದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆ ವಿವರ : ಸುಮಾರು ಒಂದು ವರ್ಷದಿಂದಲೂ ಸ್ಥಳಿಯ ವ್ಯಕ್ತಿಯೋರ್ವ 2-3 ದಿನಕ್ಕೊಮ್ಮೆ ರಾತ್ರಿ ಹಗಲು ಎನ್ನದೇ ತಾವು ಕರ್ತವ್ಯ ನಿರ್ವಹಿಸುವ ವೇಳೆ ಏಕಾಏಕಿ ಬಂದು ವಿಡಿಯೋ ಚಿತ್ರೀಕರಿಸಿ ಸಾಮಾಜೀಕ ಜಾಲತಾಣ ಹಾಗೂ ಅಧಿಕಾರಿಗಳಿಗೆ ಹರಿ ಬಿಟ್ಟು ಭಯ ಹುಟ್ಟಿಸುತ್ತಿದ್ದ ಎಂದು ಆರೋಪಿಸಲಾಗಿದ್ದು ಕುಸುಮಾ ಅವರನ್ನು ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಹೊರ ಗುತ್ತಿಗೆಯ ಸಂಸ್ಥೆಯವರಿಗೂ ಸಹ ಪತ್ರ ಬರೆದಿದ್ದ ಎನ್ನಲಾಗಿದೆ.ಗುತ್ತಿಗೆ ಸಂಸ್ಥೆಯವರು ಕುಸುಮಾ ಅವರಿಗೆ ಕೆಲಸದಿಂದ ವಜಾ ಮಾಡಿ ಪತ್ರವೂ ನೀಡಿದ್ದರು. ಅತ್ತ ಮಾತ್ರೆ ನುಂಗಿದ ಘಟನೆ ಹಿಂದಿನ ದಿನವಷ್ಟೇ ಪೋಲೀಯೋ ಲಸಿಕೆ ದಿನವೂ ಬಂದು ವಿನಃ ಕಾರಣ ಸಂತ್ರಸ್ತೆ ಕುಸುಮಾ ಕೆಲಸ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿದ್ದ ಎನ್ನಲಾಗಿದೆ.

ನಾನು 10 ವರ್ಷದಿಂದ ಕೆಲಸ ಮಾಡುತ್ತಿದ್ದೆ.ಆದರೆ ಯಾವುದೇ ಆರೋಪಗಳಿಲ್ಲದೇ ನನ್ನನ್ನು ವಜಾ ಮಾಡುತ್ತಿದ್ದಾರೆ ಎನ್ನುವ ಕಿರುಕುಳಕ್ಕೆ ಬೇಸತ್ತ ಕುಸುಮಾ ಮಾತ್ರೆ ಸೇವನೆ ಮಾಡಿದ್ದಾಳೆ ಎಂದು ಅವರ ಸಂಬAಧಿಕರು ಆರೋಪಿಸಿದ್ದಾರೆ.
ಮೇಲಿಂದ ಮೇಲೆ ವಿಡಿಯೋ ಚಿತ್ರೀಕರಣ ಮಾಡುವ ಪರಿಣಾಮ ನಮಗೆ ರಕ್ಷಣೆ ಇಲ್ಲದಂತಾಗಿದೆ, ಎಲ್ಲರ ಕರ್ತವ್ಯಕ್ಕೂ ಸಹ ಅಡಚಣೆ ಉಂಟು ಮಾಡುತ್ತಿದ್ದಾನೆ.ಮಾತೆತ್ತಿದರೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃ ಚೌಧರಿ ಅವರ ಹೆಸರು ಹೇಳಿ ಬೆದರಿಸುತ್ತಿದ್ದಾನೆ.ನಾವು ಇಲ್ಲಿ ಕರ್ತವ್ಯ ಮಾಡುವುದಿಲ್ಲ ಎಂದು ಆಸ್ಪತ್ರೆಯ ಹೊರ ಭಾಗದಲ್ಲಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳ ಭೇಟಿ: ಘಟನೆ ಅರಿತ ತಹಶೀಲ್ದಾರ ಕೀರ್ತಿ ಚಾಲಕ, ಟಿಎಚ್‌ಓ ಡಾ.ಸತೀಶ ತಿವಾರಿ, ಪಿಎಸ್‌ಐ ಸಂಜಯ್ ತಿಪರೆಡ್ಡಿ,ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ, ಪ.ಪಂ ಸಿಓ ಪ್ರಶಾಂತ್ ಸಿ., ಮತ್ತಿತರರು ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.ಅಲ್ಲದೇ ಆರೋಪಿ ಯಾರೇ ಇರಲಿ ತಾವು ಪ್ರಕರಣ ದಾಖಲಿಸಿದರೆ ಬಂಧಿಸುತ್ತೇವೆ.ಪ್ರತಿಭಟನೆ ಕೈ ಬಿಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮನವಿ ಮಾಡಿಕೊಂಡ ನಂತರ ಪ್ರತಿಭಟನೆ ಕೈಬಿಟ್ಟಿದ್ದಾರೆ.ಆದರೆ ಘಟನೆಗೆ ಸಂಬAಧಿಸಿದAತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಪಿಎಸೈ ಸಂಜಯ ತಿಪರೆಡ್ಡಿ ಮಾಹಿತಿ ನೀಡಿದ್ದಾರೆ.

Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ