ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು ಅಂತಹ ತಾಂತ್ರಿಕ ನೈಪುಣ್ಯತೆಯ ಕಾಲೇಜು ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಇರಲಿಲ್ಲ.ಇದೀಗ ಶಾಸಕ ಸಿ.ಎಸ್.ನಾಡಗೌಡ ಅವರು ವಿಶೇಷ ಮುತುವರ್ಜಿ ವಹಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರವನ್ನು ತಂದಿದ್ದು ಯುವಜನರು,ಮಧ್ಯಮ ವರ್ಗದವರಿಗೆ ಈ ಕಾಲೇಜು ಹೊಸ ಭರವಸೆಯನ್ನು ಹುಟ್ಟು ಹಾಕಿದೆ.
ಪಟ್ಟಣದ ಪುರಸಭೆ,ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಹಾಗೂ ಕೆ.ಎಸ್.ಡಿ.ಎಲ್. (ಸಿ.ಎಸ್.ಆರ್) ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಸೆ.3 ರಂದು ಹಮ್ಮಿಕೊಳ್ಳಲಾಗಿದ್ದು ಅದರಲ್ಲಿ ನೂತನ ಕೈಗಾರಿಕಾ ತರಬೇತಿ ಕೇಂದ್ರದ ಕಟ್ಟಡ ಉದ್ಘಾಟನೆಯೂ ಸೇರಿದೆ.ಅಲ್ಲದೇ ಬಹುನಿರೀಕ್ಷಿತ ತಾಪಂ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಸೇರಿದಂತೆ ಒಟ್ಟು 8.63 ಕೋಟಿ ರೂ.ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.
ಬೆಳಗ್ಗೆ 10ಕ್ಕೆ ಮುದ್ದೇಬಿಹಾಳ ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪಾರ್ವತಿಬಾಯಿ ಬೋರಮಲ್ ಓಸ್ವಾಲ್ (ಜೈನ್) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ, 11.00 ಘಂಟೆಗೆ ಇಂದಿರಾ ನಗರದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ,ಮದ್ಯಾಹ್ನ 12.00 ಘಂಟೆಗೆ ತಾ.ಪಂ ನೂತನ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಚಾಲನೆ,1.00 ಘಂಟೆಗೆ ತಾಪಂ ಕಚೇರಿಯಲ್ಲಿ ಬಯಲು ರಂಗಮAದಿರ ನಿರ್ಮಾಣ,ಹಳೆ ಪೊಲೀಸ್ ಠಾಣೆಯ ಕಟ್ಟಡ ನವೀಕರಣ,3.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಸರ್ಕಲ್ಗಳಿಗೆ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡುವರು.
3.30 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ (ಬಸವೇಶ್ವರ ಸರ್ಕಲ್ ಹತ್ತಿರ) ಕಾಮಗಾರಿ ಪರಿಶೀಲನೆ,ಸಾಯಂಕಾಲ 4.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಮೆಹಬೂಬ ನಗರದ ಸರ್ಕಾರಿ ಉರ್ದು ಶಾಲೆಯ 4 ಕೊಠಡಿಗಳ ನಿರ್ಮಾಣಕ್ಕೆ ಚಾಲನೆ, 5.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ದೇವಸ್ಥಾನ ಹತ್ತಿರ ನಿರ್ಮಾಣವಾಗುತ್ತಿರುವ ಮೆಗಾ ಮಾರ್ಕೆಟ್ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







