Workers' money should be used for workers' welfare: Minister Lad

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು.

ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ, ಬೇರೆ ಇಲಾಖೆಗೆ ನೀಡಲಾಗದು. ಅದಕ್ಕೆ ಅವಕಾಶ ಇಲ್ಲ. ಆದ್ದರಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ. ಈ ಬಗ್ಗೆ ಸ್ಪಷ್ಟ ನಿರ್ದೇಶನ ಇದೆ ಎಂದು ಸಚಿವ ಲಾಡ್‌ ಅವರು ಹೇಳಿದರು.

ʼಸಾವಿರಾರು ಕೋಟಿ ಹಣ ಇದೆ ಎಂಬ ಮಾತ್ರಕ್ಕೆ ಜಿಲ್ಲೆಗೊಂದರಂತೆ ವಸತಿ ಶಾಲೆ ತೆರೆಯುತ್ತೀದ್ದೀರಾ? ಎಂಬ ಬಿಜೆಪಿ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಮಂಡಳಿಯಲ್ಲಿ ಹಣ ಇದೆ ಎಂಬ ಕಾರಣದಿಂದ ವಸತಿ ಶಾಲೆ ಆರಂಭಿಸುತ್ತಿಲ್ಲ. ಎಲ್ಲಾ ಸರ್ಕಾರದಲ್ಲೂ ವಸತಿ ಶಾಲೆ ಆರಂಭವಾಗಿವೆ. ಬಿಸಿಎಂ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ವಸತಿ ಶಾಲೆಗಳಿವೆ. ವಸತಿ ಶಾಲೆಗಳನ್ನು ತೆರೆದರೆ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬ ಭಯ ಬೇಡ. ಹಾಗಾದರೆ ಯಾವುದೇ ಇಲಾಖೆಯಿಂದ ವಸತಿ ಶಾಲೆ ಆರಂಭಿಸಬಾರದೇ ಎಂದು ಪ್ರಶ್ನೆ ಮಾಡಿದರು.

ಸದನದಲ್ಲಿ ಸುಳ್ಳು ಮಾತನಾಡಲಾಗದು. ಸುಳ್ಳು ಮಾಹಿತಿ ನೀಡಲಾಗದು. ಆದ್ದರಿಂದ ಸರ್ಕಾರದ ನಿಯಮಾವಳಿಗಳು ಏನಿವೆ ಅದರಂತೆ ಕೆಲಸ ಮಾಡಬೇಕು. ನಿರ್ಮಾಣ ಕಾರ್ಮಿಕರು ಕೆಲಸಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗ್ತ ಇರುತ್ತಾರೆ. ಅವರು ಮಕ್ಕಳನ್ನು ಒಂದು ನಿಗದಿತ ವಸತಿ ಶಾಲೆಯಲ್ಲಿ ದಾಖಲು ಮಾಡಿದರೆ ಅನುಕೂಲವಾಗಲಿದೆ. ಎಲ್ಲರಿಗೂ ಇರುವ ಕಾಳಜಿಯಂತೆಯೇ ನಮಗೂ ಇದೆ ಎಂದರು.

ಬೇರೆ ಉದ್ದೇಶಕ್ಕೆ ಸೆಸ್‌ ಬಳಕೆಗೆ ಅವಕಾಶ ಇಲ್ಲ:
ಯಾವ ಉದ್ದೇಶಕ್ಕಾಗಿ ಸೆಸ್‌ ಸಂಗ್ರಹ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ನಿಯಮ ಇದೆ. ಬೇರೆ ಇಲಾಖೆಗೆ ಹಾಗೂ ಬೇರೆಯವರಿಗೆ ಅದನ್ನು ಕೊಡಲಾಗದು. ಸಾರಿಗೆಯಿಂದ ಸೆಸ್‌ ಸಂಗ್ರಹಿಸಿದರೆ ಅದನ್ನು ಅಸಂಘಟಿತ ಕಾರ್ಮಿಕರಿಗೆ ಕೊಡಲು ಬರಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ ಸಹ ಹೇಳಿದೆ ಎಂದು ವಿವರಿಸಿದರು.

ನಮ್ಮಲ್ಲಿ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆ ಇದೆ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನಷ್ಟು ಹಾಸ್ಟೆಲ್‌ ಬೇಕು ಎಂದು ಮಕ್ಕಳು ಕರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಾಡಿದರೆ ಅನುಕೂಲವಾಗಲಿದೆ. ಒಟ್ಟಿನಲ್ಲಿ ಹಣ ಸದುಪಯೋಗ ಮಾಡಬೇಕು. ಕೆಲವು ಹಾಸ್ಟೆಲ್‌ ಪ್ರವೇಶಕ್ಕೆ ಪರೀಕ್ಷೆ ಇದೆ. ಪ್ರತಿಭಾವಂತರು ಮಾತ್ರವೇ ಅಲ್ಲಿ ಪ್ರವೇಶ ಪಡೆಯುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಗೋಡೆ ಕಟ್ಟುವವರು, ಪೇಂಟರ್‌, ಬಡಗಿಗಳ ಮಕ್ಕಳಿಗೆ ಒಳ್ಳೆಯ ಹಾಸ್ಟೆಲ್‌ ಸಿಕ್ಕರೆ ಅವರು ಓದುತ್ತಾರೆ ಎಂದರು.

ನಮ್ಮಲ್ಲಿ ಹಣ ಇದೆ. ಕಳೆದ ಮೂರು ವರ್ಷದಲ್ಲಿ ೧೪ ಲಕ್ಷ ಮಕ್ಕಳಿಗೆ ಪ್ರೋತ್ಸಾಹಧನ ಕೊಟ್ಟಿದ್ದೇವೆ. ಕೋಟ್ಯಂತರ ಹಣ ಬರ್ತಾ ಇದೆ, ಅದು ಸರಿಯಾಗಿ ಬಳಕೆ ಆಗಬೇಕು ಎಂದು ವಿವರಿಸಿದರು.

ಇಲಾಖೆಯಿಂದ ಕೌಶಲ್ಯ ಕೇಂದ್ರ ಆರಂಭ:
ಕಟ್ಟಡ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇಂದಿನ ಉದ್ಯೋಗಕ್ಕೆ ಬೇಕಾದ ಕೌಶಲ ತರಬೇತಿ ನೀಡುತ್ತೇವೆ. ಕೇವಲ ಪ್ರಮಾಣ ಪತ್ರ ಕೊಟ್ಟರೆ ಪ್ರಯೋಜನ ಇಲ್ಲ. ತರಬೇತಿ ಕಾಲಕಾಲಕ್ಕೆ ಬದಲಾಗುತ್ತವೆ. ಈ ತರಬೇತಿಯನ್ನ ಸರ್ಕಾರ ಕೊಡಲ್ಲ. ಉದ್ಯಮದವರೇ ಕೊಡ್ತಾರೆ. ಅವರೇ ಸಿಲಬಸ್‌ ಕೊಡ್ತಾರೆ. ಸರ್ಕಾರ ಕೊಡಲ್ಲ ʼಉದ್ಯಮದವರೇ ತರಬೇತಿ ಕೊಡತಾರೆ. ಅಂತರರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಾವು ಕೊಡ್ತಿವಿ ಎಂದರು.

ನಾವು ವೈರಿಗಳಲ್ಲ, ಸಲಹೆ ನೀಡಿ: ಯಾವುದೇ ವಿಷಯದ ಬಗ್ಗೆ ಸಲಹೆ ನೀಡಿ. ಮುಕ್ತ ಹೃದಯದಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ನಾವು ಯಾರೂ ವೈರಿಗಳಲ್ಲ. ಟೀಕೆ ಮಾಡಿದರೆ ವೈಷಮ್ಯ ಮಾಡಲ್ಲ. ಗೌರವಿಸುತ್ತೇನೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸದಸ್ಯ ಬೋಜೆಗೌಡ ಅವರು, ಕಾರ್ಮಿಕ ಸಚಿವರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಿ. ಕಾರ್ಮಿಕರ ಮಕ್ಕಳು ಕಾರ್ಮಿಕರೇ ಆಗಬೇಕಿಲ್ಲ. ಅವರೂ ಒಳ್ಳೆಯ ತರಬೇತಿ ಪಡೆಯಲಿ. ವಿದ್ಯಾವಂತರಾಗಲಿ ಎಂದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ