Workers' money should be used for workers' welfare: Minister Lad

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು.

ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ, ಬೇರೆ ಇಲಾಖೆಗೆ ನೀಡಲಾಗದು. ಅದಕ್ಕೆ ಅವಕಾಶ ಇಲ್ಲ. ಆದ್ದರಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ. ಈ ಬಗ್ಗೆ ಸ್ಪಷ್ಟ ನಿರ್ದೇಶನ ಇದೆ ಎಂದು ಸಚಿವ ಲಾಡ್‌ ಅವರು ಹೇಳಿದರು.

ʼಸಾವಿರಾರು ಕೋಟಿ ಹಣ ಇದೆ ಎಂಬ ಮಾತ್ರಕ್ಕೆ ಜಿಲ್ಲೆಗೊಂದರಂತೆ ವಸತಿ ಶಾಲೆ ತೆರೆಯುತ್ತೀದ್ದೀರಾ? ಎಂಬ ಬಿಜೆಪಿ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಮಂಡಳಿಯಲ್ಲಿ ಹಣ ಇದೆ ಎಂಬ ಕಾರಣದಿಂದ ವಸತಿ ಶಾಲೆ ಆರಂಭಿಸುತ್ತಿಲ್ಲ. ಎಲ್ಲಾ ಸರ್ಕಾರದಲ್ಲೂ ವಸತಿ ಶಾಲೆ ಆರಂಭವಾಗಿವೆ. ಬಿಸಿಎಂ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ವಸತಿ ಶಾಲೆಗಳಿವೆ. ವಸತಿ ಶಾಲೆಗಳನ್ನು ತೆರೆದರೆ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬ ಭಯ ಬೇಡ. ಹಾಗಾದರೆ ಯಾವುದೇ ಇಲಾಖೆಯಿಂದ ವಸತಿ ಶಾಲೆ ಆರಂಭಿಸಬಾರದೇ ಎಂದು ಪ್ರಶ್ನೆ ಮಾಡಿದರು.

ಸದನದಲ್ಲಿ ಸುಳ್ಳು ಮಾತನಾಡಲಾಗದು. ಸುಳ್ಳು ಮಾಹಿತಿ ನೀಡಲಾಗದು. ಆದ್ದರಿಂದ ಸರ್ಕಾರದ ನಿಯಮಾವಳಿಗಳು ಏನಿವೆ ಅದರಂತೆ ಕೆಲಸ ಮಾಡಬೇಕು. ನಿರ್ಮಾಣ ಕಾರ್ಮಿಕರು ಕೆಲಸಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗ್ತ ಇರುತ್ತಾರೆ. ಅವರು ಮಕ್ಕಳನ್ನು ಒಂದು ನಿಗದಿತ ವಸತಿ ಶಾಲೆಯಲ್ಲಿ ದಾಖಲು ಮಾಡಿದರೆ ಅನುಕೂಲವಾಗಲಿದೆ. ಎಲ್ಲರಿಗೂ ಇರುವ ಕಾಳಜಿಯಂತೆಯೇ ನಮಗೂ ಇದೆ ಎಂದರು.

ಬೇರೆ ಉದ್ದೇಶಕ್ಕೆ ಸೆಸ್‌ ಬಳಕೆಗೆ ಅವಕಾಶ ಇಲ್ಲ:
ಯಾವ ಉದ್ದೇಶಕ್ಕಾಗಿ ಸೆಸ್‌ ಸಂಗ್ರಹ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ನಿಯಮ ಇದೆ. ಬೇರೆ ಇಲಾಖೆಗೆ ಹಾಗೂ ಬೇರೆಯವರಿಗೆ ಅದನ್ನು ಕೊಡಲಾಗದು. ಸಾರಿಗೆಯಿಂದ ಸೆಸ್‌ ಸಂಗ್ರಹಿಸಿದರೆ ಅದನ್ನು ಅಸಂಘಟಿತ ಕಾರ್ಮಿಕರಿಗೆ ಕೊಡಲು ಬರಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ ಸಹ ಹೇಳಿದೆ ಎಂದು ವಿವರಿಸಿದರು.

ನಮ್ಮಲ್ಲಿ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆ ಇದೆ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನಷ್ಟು ಹಾಸ್ಟೆಲ್‌ ಬೇಕು ಎಂದು ಮಕ್ಕಳು ಕರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಾಡಿದರೆ ಅನುಕೂಲವಾಗಲಿದೆ. ಒಟ್ಟಿನಲ್ಲಿ ಹಣ ಸದುಪಯೋಗ ಮಾಡಬೇಕು. ಕೆಲವು ಹಾಸ್ಟೆಲ್‌ ಪ್ರವೇಶಕ್ಕೆ ಪರೀಕ್ಷೆ ಇದೆ. ಪ್ರತಿಭಾವಂತರು ಮಾತ್ರವೇ ಅಲ್ಲಿ ಪ್ರವೇಶ ಪಡೆಯುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಗೋಡೆ ಕಟ್ಟುವವರು, ಪೇಂಟರ್‌, ಬಡಗಿಗಳ ಮಕ್ಕಳಿಗೆ ಒಳ್ಳೆಯ ಹಾಸ್ಟೆಲ್‌ ಸಿಕ್ಕರೆ ಅವರು ಓದುತ್ತಾರೆ ಎಂದರು.

ನಮ್ಮಲ್ಲಿ ಹಣ ಇದೆ. ಕಳೆದ ಮೂರು ವರ್ಷದಲ್ಲಿ ೧೪ ಲಕ್ಷ ಮಕ್ಕಳಿಗೆ ಪ್ರೋತ್ಸಾಹಧನ ಕೊಟ್ಟಿದ್ದೇವೆ. ಕೋಟ್ಯಂತರ ಹಣ ಬರ್ತಾ ಇದೆ, ಅದು ಸರಿಯಾಗಿ ಬಳಕೆ ಆಗಬೇಕು ಎಂದು ವಿವರಿಸಿದರು.

ಇಲಾಖೆಯಿಂದ ಕೌಶಲ್ಯ ಕೇಂದ್ರ ಆರಂಭ:
ಕಟ್ಟಡ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇಂದಿನ ಉದ್ಯೋಗಕ್ಕೆ ಬೇಕಾದ ಕೌಶಲ ತರಬೇತಿ ನೀಡುತ್ತೇವೆ. ಕೇವಲ ಪ್ರಮಾಣ ಪತ್ರ ಕೊಟ್ಟರೆ ಪ್ರಯೋಜನ ಇಲ್ಲ. ತರಬೇತಿ ಕಾಲಕಾಲಕ್ಕೆ ಬದಲಾಗುತ್ತವೆ. ಈ ತರಬೇತಿಯನ್ನ ಸರ್ಕಾರ ಕೊಡಲ್ಲ. ಉದ್ಯಮದವರೇ ಕೊಡ್ತಾರೆ. ಅವರೇ ಸಿಲಬಸ್‌ ಕೊಡ್ತಾರೆ. ಸರ್ಕಾರ ಕೊಡಲ್ಲ ʼಉದ್ಯಮದವರೇ ತರಬೇತಿ ಕೊಡತಾರೆ. ಅಂತರರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಾವು ಕೊಡ್ತಿವಿ ಎಂದರು.

ನಾವು ವೈರಿಗಳಲ್ಲ, ಸಲಹೆ ನೀಡಿ: ಯಾವುದೇ ವಿಷಯದ ಬಗ್ಗೆ ಸಲಹೆ ನೀಡಿ. ಮುಕ್ತ ಹೃದಯದಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ನಾವು ಯಾರೂ ವೈರಿಗಳಲ್ಲ. ಟೀಕೆ ಮಾಡಿದರೆ ವೈಷಮ್ಯ ಮಾಡಲ್ಲ. ಗೌರವಿಸುತ್ತೇನೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸದಸ್ಯ ಬೋಜೆಗೌಡ ಅವರು, ಕಾರ್ಮಿಕ ಸಚಿವರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಿ. ಕಾರ್ಮಿಕರ ಮಕ್ಕಳು ಕಾರ್ಮಿಕರೇ ಆಗಬೇಕಿಲ್ಲ. ಅವರೂ ಒಳ್ಳೆಯ ತರಬೇತಿ ಪಡೆಯಲಿ. ವಿದ್ಯಾವಂತರಾಗಲಿ ಎಂದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ