Workers' money should be used for workers' welfare: Minister Lad

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು.

ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ, ಬೇರೆ ಇಲಾಖೆಗೆ ನೀಡಲಾಗದು. ಅದಕ್ಕೆ ಅವಕಾಶ ಇಲ್ಲ. ಆದ್ದರಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ. ಈ ಬಗ್ಗೆ ಸ್ಪಷ್ಟ ನಿರ್ದೇಶನ ಇದೆ ಎಂದು ಸಚಿವ ಲಾಡ್‌ ಅವರು ಹೇಳಿದರು.

ʼಸಾವಿರಾರು ಕೋಟಿ ಹಣ ಇದೆ ಎಂಬ ಮಾತ್ರಕ್ಕೆ ಜಿಲ್ಲೆಗೊಂದರಂತೆ ವಸತಿ ಶಾಲೆ ತೆರೆಯುತ್ತೀದ್ದೀರಾ? ಎಂಬ ಬಿಜೆಪಿ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಮಂಡಳಿಯಲ್ಲಿ ಹಣ ಇದೆ ಎಂಬ ಕಾರಣದಿಂದ ವಸತಿ ಶಾಲೆ ಆರಂಭಿಸುತ್ತಿಲ್ಲ. ಎಲ್ಲಾ ಸರ್ಕಾರದಲ್ಲೂ ವಸತಿ ಶಾಲೆ ಆರಂಭವಾಗಿವೆ. ಬಿಸಿಎಂ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ವಸತಿ ಶಾಲೆಗಳಿವೆ. ವಸತಿ ಶಾಲೆಗಳನ್ನು ತೆರೆದರೆ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬ ಭಯ ಬೇಡ. ಹಾಗಾದರೆ ಯಾವುದೇ ಇಲಾಖೆಯಿಂದ ವಸತಿ ಶಾಲೆ ಆರಂಭಿಸಬಾರದೇ ಎಂದು ಪ್ರಶ್ನೆ ಮಾಡಿದರು.

ಸದನದಲ್ಲಿ ಸುಳ್ಳು ಮಾತನಾಡಲಾಗದು. ಸುಳ್ಳು ಮಾಹಿತಿ ನೀಡಲಾಗದು. ಆದ್ದರಿಂದ ಸರ್ಕಾರದ ನಿಯಮಾವಳಿಗಳು ಏನಿವೆ ಅದರಂತೆ ಕೆಲಸ ಮಾಡಬೇಕು. ನಿರ್ಮಾಣ ಕಾರ್ಮಿಕರು ಕೆಲಸಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗ್ತ ಇರುತ್ತಾರೆ. ಅವರು ಮಕ್ಕಳನ್ನು ಒಂದು ನಿಗದಿತ ವಸತಿ ಶಾಲೆಯಲ್ಲಿ ದಾಖಲು ಮಾಡಿದರೆ ಅನುಕೂಲವಾಗಲಿದೆ. ಎಲ್ಲರಿಗೂ ಇರುವ ಕಾಳಜಿಯಂತೆಯೇ ನಮಗೂ ಇದೆ ಎಂದರು.

ಬೇರೆ ಉದ್ದೇಶಕ್ಕೆ ಸೆಸ್‌ ಬಳಕೆಗೆ ಅವಕಾಶ ಇಲ್ಲ:
ಯಾವ ಉದ್ದೇಶಕ್ಕಾಗಿ ಸೆಸ್‌ ಸಂಗ್ರಹ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ನಿಯಮ ಇದೆ. ಬೇರೆ ಇಲಾಖೆಗೆ ಹಾಗೂ ಬೇರೆಯವರಿಗೆ ಅದನ್ನು ಕೊಡಲಾಗದು. ಸಾರಿಗೆಯಿಂದ ಸೆಸ್‌ ಸಂಗ್ರಹಿಸಿದರೆ ಅದನ್ನು ಅಸಂಘಟಿತ ಕಾರ್ಮಿಕರಿಗೆ ಕೊಡಲು ಬರಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ ಸಹ ಹೇಳಿದೆ ಎಂದು ವಿವರಿಸಿದರು.

ನಮ್ಮಲ್ಲಿ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆ ಇದೆ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನಷ್ಟು ಹಾಸ್ಟೆಲ್‌ ಬೇಕು ಎಂದು ಮಕ್ಕಳು ಕರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಾಡಿದರೆ ಅನುಕೂಲವಾಗಲಿದೆ. ಒಟ್ಟಿನಲ್ಲಿ ಹಣ ಸದುಪಯೋಗ ಮಾಡಬೇಕು. ಕೆಲವು ಹಾಸ್ಟೆಲ್‌ ಪ್ರವೇಶಕ್ಕೆ ಪರೀಕ್ಷೆ ಇದೆ. ಪ್ರತಿಭಾವಂತರು ಮಾತ್ರವೇ ಅಲ್ಲಿ ಪ್ರವೇಶ ಪಡೆಯುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಗೋಡೆ ಕಟ್ಟುವವರು, ಪೇಂಟರ್‌, ಬಡಗಿಗಳ ಮಕ್ಕಳಿಗೆ ಒಳ್ಳೆಯ ಹಾಸ್ಟೆಲ್‌ ಸಿಕ್ಕರೆ ಅವರು ಓದುತ್ತಾರೆ ಎಂದರು.

ನಮ್ಮಲ್ಲಿ ಹಣ ಇದೆ. ಕಳೆದ ಮೂರು ವರ್ಷದಲ್ಲಿ ೧೪ ಲಕ್ಷ ಮಕ್ಕಳಿಗೆ ಪ್ರೋತ್ಸಾಹಧನ ಕೊಟ್ಟಿದ್ದೇವೆ. ಕೋಟ್ಯಂತರ ಹಣ ಬರ್ತಾ ಇದೆ, ಅದು ಸರಿಯಾಗಿ ಬಳಕೆ ಆಗಬೇಕು ಎಂದು ವಿವರಿಸಿದರು.

ಇಲಾಖೆಯಿಂದ ಕೌಶಲ್ಯ ಕೇಂದ್ರ ಆರಂಭ:
ಕಟ್ಟಡ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇಂದಿನ ಉದ್ಯೋಗಕ್ಕೆ ಬೇಕಾದ ಕೌಶಲ ತರಬೇತಿ ನೀಡುತ್ತೇವೆ. ಕೇವಲ ಪ್ರಮಾಣ ಪತ್ರ ಕೊಟ್ಟರೆ ಪ್ರಯೋಜನ ಇಲ್ಲ. ತರಬೇತಿ ಕಾಲಕಾಲಕ್ಕೆ ಬದಲಾಗುತ್ತವೆ. ಈ ತರಬೇತಿಯನ್ನ ಸರ್ಕಾರ ಕೊಡಲ್ಲ. ಉದ್ಯಮದವರೇ ಕೊಡ್ತಾರೆ. ಅವರೇ ಸಿಲಬಸ್‌ ಕೊಡ್ತಾರೆ. ಸರ್ಕಾರ ಕೊಡಲ್ಲ ʼಉದ್ಯಮದವರೇ ತರಬೇತಿ ಕೊಡತಾರೆ. ಅಂತರರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಾವು ಕೊಡ್ತಿವಿ ಎಂದರು.

ನಾವು ವೈರಿಗಳಲ್ಲ, ಸಲಹೆ ನೀಡಿ: ಯಾವುದೇ ವಿಷಯದ ಬಗ್ಗೆ ಸಲಹೆ ನೀಡಿ. ಮುಕ್ತ ಹೃದಯದಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ನಾವು ಯಾರೂ ವೈರಿಗಳಲ್ಲ. ಟೀಕೆ ಮಾಡಿದರೆ ವೈಷಮ್ಯ ಮಾಡಲ್ಲ. ಗೌರವಿಸುತ್ತೇನೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸದಸ್ಯ ಬೋಜೆಗೌಡ ಅವರು, ಕಾರ್ಮಿಕ ಸಚಿವರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಿ. ಕಾರ್ಮಿಕರ ಮಕ್ಕಳು ಕಾರ್ಮಿಕರೇ ಆಗಬೇಕಿಲ್ಲ. ಅವರೂ ಒಳ್ಳೆಯ ತರಬೇತಿ ಪಡೆಯಲಿ. ವಿದ್ಯಾವಂತರಾಗಲಿ ಎಂದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು