Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್