Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ