Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ