ಹೊಸ ಕ್ಯಾಲೆಂಡರ್‌ನಲ್ಲಿ ಹಳೆಯ ಆಡಳಿತ ಮಂಡಳಿಯದ್ದೇ ಮಾಹಿತಿ..!! ಕರ್ನಾಟಕ ಕೋ ಆಪ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಬಗ್ಗೆ ತಪ್ಪು ಸಂದೇಶ

ಹೊಸ ಕ್ಯಾಲೆಂಡರ್‌ನಲ್ಲಿ ಹಳೆಯ ಆಡಳಿತ ಮಂಡಳಿಯದ್ದೇ ಮಾಹಿತಿ..!! ಕರ್ನಾಟಕ ಕೋ ಆಪ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಬಗ್ಗೆ ತಪ್ಪು ಸಂದೇಶ

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ಹೌದು.2024ರ ಡಿಸೆಂಬರ್ 29 ರಂದು ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ.

ಆದರೆ ಪ್ರತಿಷ್ಠಿತ ಬ್ಯಾಂಕು, ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಹಕಾರಿ ಬ್ಯಾಂಕು ಎಂದು ಪ್ರಶಸ್ತಿ ಪಡೆದುಕೊಂಡಿರುವ ಬ್ಯಾಂಕಿನ ಅಧಿಕಾರಿಗಳಿಂದ ಎಡವಟ್ಟೊಂದು ನಡೆದು ಹೋಗಿದೆ. ಹೊಸ ವರ್ಷದಂದು ಬ್ಯಾಂಕಿನಿಂದ ಕ್ಯಾಲೆಂಡರ್‌ಗಳನ್ನು ವಿತರಿಸಿ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು, ಬ್ಯಾಂಕಿನ ಸೇವೆಗಳ ಬಗ್ಗೆ ಸಾರ್ವಜನಿಕರಿಗೆ, ಗ್ರಾಹಕರಿಗೆ ತಿಳಿಯಪಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ.ಅಲ್ಲದೇ ಈ ಕ್ಯಾಲೆಂಡರ್ ವಿತರಣೆಗಾಗಿ ಲಕ್ಷಾಂತರ ರೂ.ಖರ್ಚು ಕೂಡಾ ಬ್ಯಾಂಕಿನಿಂದಲೇ ಹಾಕುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆಗಿರುವ ಎಡವಟ್ಟು ಏನು: ಡಿ.29 ರಂದು ಪೂರ್ಣ ಪ್ರಮಾಣದ ಫಲಿತಾಂಶ ಬಂದಿದ್ದು ನಾಲ್ವರು ಅವಿರೋಧ ಸೇರಿ ಒಟ್ಟು 13 ಜನ ಸದಸ್ಯರು ಹೊಸದಾಗಿ ಆಯ್ಕೆಯಾಗಿದ್ದಾರೆ.

ಆದರೆ ಬ್ಯಾಂಕಿನ ಹೆಸರಿನ ಮೇಲೆ ಮುದ್ರಿಸಲಾಗಿರುವ 2025ರ ನೂತನ ವರ್ಷದ ಕ್ಯಾಲೆಂಡರ್‌ನಲ್ಲಿ ಹಿಂದಿನ ವರ್ಷದ ಪದಾಧಿಕಾರಿಗಳನ್ನೇ ಮುದ್ರಿಸಲಾಗಿರುವುದು ಸಾರ್ವಜನಿಕರಿಗೆ ಬ್ಯಾಂಕಿನ ಗ್ರಾಹಕರಿಗೆ ತಪ್ಪು ಸಂದೇಶ ರವಾನಿಸಿದಂತಾಗಿದೆ.ಇಂತಹದ್ದೊಂದು ದೊಡ್ಡ ತಪ್ಪು ನಡೆದು ಹೋಗಿದ್ದರೂ ಇಡೀ ಊರಿಗೆ ಬ್ಯಾಂಕಿನ ಹಳೆಯ ಆಡಳಿತ ಮಂಡಳಿಯವರು ಇರುವ ಮಾಹಿತಿಯನ್ನು ಹಂಚುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.ಅಲ್ಲದೇ ಹೊಸದಾಗಿ ಆಯ್ಕೆಯಾಗಿರುವ ನಿರ್ದೇಶಕರನ್ನೂ ಕಸಿವಿಸಿಗೊಳಿಸಿದೆ.
ಸದ್ಯಕ್ಕೆ ಬ್ಯಾಂಕಿಗೆ ನಿರ್ದೇಶಕರುಗಳಷ್ಟೇ ಇದ್ದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ.ಆದರೆ 2025ರ ಹನ್ನೆರಡು ತಿಂಗಳಿನ ಕ್ಯಾಲೆಂಡರ್‌ನಲ್ಲಿ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಿದ್ದ ಸತೀಶ ಓಸ್ವಾಲ್ ಹಾಗೂ ಉಪಾಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಅವರೇ ಎರಡು ಹುದ್ದೆಗಳಲ್ಲಿದ್ದು ಮಾಜಿ ಆಗಿರುವ ನಿರ್ದೇಶಕರು ಹಾಲಿ ಸ್ಥಾನದಲ್ಲಿ ರಾರಾಜಿಸುತ್ತಿದ್ದಾರೆ.ಅದರಲ್ಲಿ ಮಾಜಿ ಆಗಿರುವ ವೆಂಕನಗೌಡ ಪಾಟೀಲ್, ರವಿ ಕಮತ,ರುದ್ರಪ್ಪ ಕಡಿ, ಶ್ರೀದೇವಿ ಮದರಿ, ದಾನಮ್ಮ ನಾಗಠಾಣ, ಶ್ರೀದೇವಿ ಬೂದಿಹಾಳಮಠ, ಎಸ್.ಎಸ್.ಮಾಲಗತ್ತಿ, ಅನ್ನಪೂರ್ಣ ಪೂಜಾರ, ವೃತ್ತಿಪರ ನಿರ್ದೇಶಕರಾಗಿರುವ ಸುನೀಲ ಇಲ್ಲೂರ, ನಾಗಭೂಷಣ ನಾವದಗಿ, ಹಾಲಿ ನಿರ್ದೇಶಕರ ಸ್ಥಾನದಲ್ಲಿ ಮುಂದುವರೆಸಲಾಗಿದೆ.

ಇನ್ನೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೇ ನಡೆಯದಿರುವಾಗ ತರಾತುರಿಯಲ್ಲಿ ಬ್ಯಾಂಕಿನಿಂದ ಹಿಂದಿನ ಆಡಳಿತ ಮಂಡಳಿಯವರ ಮಾಹಿತಿ ಬ್ಯಾಂಕಿನಿಂದ ಕೊಟ್ಟಿರುವುದು ಯಾರು ? ಇದು ಜನರಿಗೆ, ಗ್ರಾಹಕರಿಗೆ ತಪ್ಪು ಸಂದೇಶ ಹೋದಂತಾಗುವುದಿಲ್ಲವೇ ? ಹೊಸ ನಿರ್ದೇಶಕರನ್ನು ಜನರಿಗೆ ಪರಿಚಯಿಸಬೇಕಾಗಿದ್ದ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಿಗೆ ಇದು ತಪ್ಪು ಎನ್ನಿಸಲಿಲ್ಲವೇ ? ಇಂತಹ ತಪ್ಪು ಮಾಹಿತಿ ಇರುವ ಕ್ಯಾಲೆಂಡರ್‌ನ್ನು ಒಂದು ವರ್ಷ ಕಾಲ ಕಚೇರಿ, ಅಂಗಡಿ, ಮನೆಗಳು, ಗ್ರಾಹಕರ ಬಳಿ ಇರಲಿದ್ದು ಆಡಳಿತ ಮಂಡಳಿ ಬಗ್ಗೆ ತಪ್ಪು ಮಾಹಿತಿ ಇರುವ ಕ್ಯಾಲೆಂಡರ್‌ಗಳ ಹಂಚಿಕೆ ನಿಲ್ಲಿಸಿ ಹೊಸ ಆಡಳಿತ ಮಂಡಳಿಯವರು ಇರುವ ಕ್ಯಾಲೆಂಡರ್‌ಗಳನ್ನು ವಿತರಿಸಬೇಕು ಎಂಬ ಮಾತುಗಳು ಗ್ರಾಹಕರಿಂದ ಕೇಳಿ ಬಂದಿವೆ.ಅಲ್ಲದೇ ಈ ತಪ್ಪು ನಡೆದಿರುವುದಕ್ಕೆ ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಿ ತಪ್ಪಾಗಿ ಹಿಂದಿನ ಆಡಳಿತ ಮಂಡಳಿಯವರ ಮಾಹಿತಿ ಮುದ್ರಿಸಿರುವ ಕ್ಯಾಲೆಂಡರ್ ವೆಚ್ಚವನ್ನು ಬ್ಯಾಂಕಿನ ಖರ್ಚಿನಲ್ಲಿ ಸೇರಿಸಬಾರದು ಎಂಬ ಆಗ್ರಹಗಳು ಕೇಳಿ ಬಂದಿವೆ.

ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರು : ಪ್ರಭುರಾಜ ಕಲ್ಬುರ್ಗಿ, ಸತೀಶಕುಮಾರ ಓಸ್ವಾಲ್,ನಿಂಗಪ್ಪ ಚಟ್ಟೇರ, ರಾಜಶೇಖರ ಕರಡ್ಡಿ, ಅಜೀತ ನಾಗಠಾಣ,ಸಂಗನಗೌಡ ಬಿರಾದಾರ, ಚಂದ್ರಶೇಖರ ಸಜ್ಜನ, ಚೆನ್ನಪ್ಪಗೌಡ ಬಿರಾದಾರ, ಗುರುಲಿಂಗಪ್ಪಗೌಡ ಪಾಟೀಲ್, ವಿಜಯಲಕ್ಷ್ಮೀ ಬೂದಿಹಾಳಮಠ,ರಕ್ಷಿತಾ ಬಿದರಕುಂದಿ, ಶ್ರೀಕಾಂತ ಚಲವಾದಿ, ಶ್ರೀಶೈಲ ಪೂಜಾರಿ ಅವರು ಬ್ಯಾಂಕಿನ 2025ರಿಂದ ಐದು ವರ್ಷದ ಅವಧಿಗೆ ಮುಂದುವರೆಯಲಿದ್ದಾರೆ.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.