ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

Boat Online such broker bear blast slot free spins as Yahtzee

BlogsBroker bear blast slot free spins: The brand new Dice:Yahtzee ThumbAdded

Păcănele Online Sweet nv casino Bonanza Gratis În Dans Pacanele

ContentNv casino | Caracteristica Bonus Roata Grămadă Să BaniSă Sunt Pacanele

Hra Chicken Road od InOut Games se blíží k velikosti velkého města.

Theme a Design Hra Chicken Road je netradiční online herní automat

Hühnerrad-Münzspiel im Stil von Casino Slot Machine – Die Ernte des Glücks bei Chicken Cross

In den letzten Jahren haben sich Online-Casinos um die Welt zu

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ ಉದ್ಘಾಟನೆ,ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ ಮಾತನಾಡಿ, ವೈದ್ಯಕೀಯ ಸೇವೆಯನ್ನು