ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ