ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ